ನಗರದಲ್ಲಿ ಇಂದು ಗೃಹಲಕ್ಷ್ಮಿ ಯೋಜನೆಗೆ ಚಾಲನೆ

ಸರ್ಕಾರದ ಮಹತ್ವಕಾಂಕ್ಷೆ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಗೆ ಇಂದು ರಾಜ್ಯಾದ್ಯಂತ ಚಾಲನೆ ನೀಡಲಾಗುತ್ತದೆ. ದಾವಣಗೆರೆ ಜಿಲ್ಲೆಯಲ್ಲಿ ನಗರದ 11 ಕಡೆ ವಿವಿಧ ಸ್ಥಳಗಳಲ್ಲಿ ಮತ್ತು ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಕಾರ್ಯಕ್ರಮ ನಡೆಯಲಿದೆ. 

ಜಿಲ್ಲಾ ಮಟ್ಟದ ಕಾರ್ಯಕ್ರಮವು ಇಂದು ಬೆಳಿಗ್ಗೆ 11 ಗಂಟೆಗೆ ಶಾಮನೂರು ಶಿವಶಂಕರಪ್ಪ ಪಾರ್ವತಮ್ಮ ಸಮುದಾಯ ಭವನದಲ್ಲಿ ನಡೆಯಲಿದೆ. ಈ ಕಾರ್ಯಕ್ರಮದ ವೇದಿಕೆ ಹಾಗೂ ನೇರಪ್ರಸಾರದ ಸಿದ್ದತೆ ಸೇರಿದಂತೆ ಆಗಮಿಸುವ ಫಲಾನುಭವಿಗಳಿಗೆ ಊಟ ಉಪಚಾರದ ಬಗ್ಗೆ ಜಿಲ್ಲಾಧಿಕಾರಿ ಎಂ.ವಿ. ವೆಂಕಟೇಶ್ ಪರಿಶೀಲನೆ ನಡೆಸಿದರು. 

ನಗರದಲ್ಲಿ ಇಂದು ಜರುಗುವ ಕಾರ್ಯಕ್ರಮ ಸ್ಥಳಗಳು: ಮಹಾನಗರ ಪಾಲಿಕೆ ಕಛೇರಿ, ಪಿ.ಬಿ ರಸ್ತೆ ವಾರ್ಡ್ ನಂ.25, 17, ಮಹಾನಗರ ಪಾಲಿಕೆ ಕಛೇರಿ 3 ವಿಭಾಗ ವಾರ್ಡ್ ನಂ.25, ನೂರಾನಿ ಶಾದಿ ಮಹಲ್, ಇಮಾಂ ನಗರ, ವಾರ್ಡ್ ನಂ.11, ಆಯಿ ಶಾದಿಮಹಲ್, ಅಕ್ಸಾ ಮಸೀದಿ ಪಕ್ಕ, ವಾರ್ಡ್ ನಂ.12, ಚನ್ನಗಿರಿ ವಿರುಪಾಕ್ಷಪ್ಪ ಕಲ್ಯಾಣ ಮಂದಿರ, ಗಡಿಯಾರ ಕಂಬದ ಹತ್ತಿರ ವಾರ್ಡ್ ನಂ. 18, ಮಲ್ಲಿಕಾರ್ಜುನ ಸಮುದಾಯ ಭವನ, ಆರ್.ಎಂ.ಸಿ. ರಸ್ತೆ, ಬಂಬೂ ಬಜಾರ್ ವಾರ್ಡ್ ನಂ.20, 21, ಗೋಲ್ಡನ್ ಪ್ಯಾಲೇಸ್ ಬೂದಾಳ್ ರೋಡ್, ರಿಂಗ್ ರಸ್ತೆ, ವಾರ್ಡ್ ನಂ. 5, ಯಲ್ಲಮ್ಮ ದೇವಿ ಸಮುದಾಯ ಭವನ, ಜಾಲಿನಗರ ವಾರ್ಡ್ ನಂ. 7, ಚಿದಂಬರ ದೇವಸ್ಥಾನ ಸಮುದಾಯ ಭವನ, ನಿಟ್ಟುವಳ್ಳಿ ವಾರ್ಡ್ ನಂ. 29, ಅಂಬೇಡ್ಕರ್ ಸಮುದಾಯ ಭವನ, ಗಾಂಧಿ ನಗರ ವಾರ್ಡ್ ನಂ.1 ಇಲ್ಲಿ ಕಾರ್ಯಕ್ರಮ ನಡೆಯಲಿದೆ.

error: Content is protected !!