ಕನಕ ನೌಕರರ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಕನಕ ನೌಕರರ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಹರಿಹರ, ಆ. 31 – ಶ್ರೀ ಕನಕ ನೌಕರರ ಸಂಘದ ವತಿಯಿಂದ 2022-23ನೇ ಸಾಲಿನಲ್ಲಿ 10ನೇ ತರಗತಿ ಮತ್ತು ದ್ವಿತೀಯ ಪಿ.ಯು.ಸಿ.ಯಲ್ಲಿ ಶೇಕಡ 75% ಕಿಂತ ಹೆಚ್ಚು ಅಂಕ ಪಡೆದ ಹರಿಹರ ತಾಲ್ಲೂಕು ವ್ಯಾಪ್ತಿಯ ಕುರುಬ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಕುರುಬ ಸಮಾಜದ ವಿದ್ಯಾರ್ಥಿಗಳು ಸೆಪ್ಟೆಂಬರ್ 10 ರ ಒಳಗಾಗಿ ಅರ್ಜಿ ಸಲ್ಲಿಸುವಂತೆ ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ ನಿಜಲಿಂಗಪ್ಪ ಕೆ.ಹೆಚ್.7829271286, ಜಯಪ್ಪ ಕೆ.ಹೆಚ್‌.6362668178, ಮಂಜುನಾಥ ಆಡಿನ 8971962969,ಕರಿಬಸಪ್ಪ ಡಿ.ಕೆ. 9901909658 ಈ ಮೊಬೈಲ್ ಸಂಖ್ಯೆಗಳಿಗೆ ಸಂಪರ್ಕಿಸಬಹುದು.

error: Content is protected !!