ಪ್ಲಾಸ್ಟರ್ ಗಣೇಶ ವಿಗ್ರಹಗಳನ್ನು ನೀರಿನ ಮೂಲಗಳಲ್ಲಿ ವಿಸರ್ಜನೆಗೆ ನಿಷೇಧ

ದಾವಣಗೆರೆ, ಸೆ. 5 – ಗಣೇಶ ಚತುರ್ಥಿ ಅಂಗವಾಗಿ ಗಣೇಶ ವಿಗ್ರಹಗಳನ್ನು ಪ್ರತಿಷ್ಟಾಪಿಸಿ ನೀರಿನ ಮೂಲಗಳಲ್ಲಿ ವಿಸರ್ಜನೆ ಮಾಡಲಾಗುತ್ತದೆ. ಆದರೆ ವಿಸರ್ಜನೆಯಿಂದಾಗುವ ಜಲ ಮಾಲಿನ್ಯ ನಿಯಂತ್ರಿಸುವ ನಿಟ್ಟಿನಲ್ಲಿ  ಕೆರೆ, ನದಿ, ಕಾಲುವೆ, ಬಾವಿ ಹಾಗೂ ಇತರೆ ಜಲ ಮೂಲಗಳಲ್ಲಿ ಪ್ಲಾಸ್ಟರ್ ಆಫ್ ಪ್ಯಾರೀಸ್‍ನಿಂದ ಮಾಡಿರುವ ಹಾಗೂ ಬಣ್ಣ ಲೇಪಿತ ವಾದಂತಹ ವಿಗ್ರಹಗಳನ್ನು ವಿಸರ್ಜಿಸುವುದನ್ನು ನಿಷೇಧಿಸಲಾಗಿದೆ.

ಜಿಲ್ಲೆಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರೀಸ್‍ನಿಂದ ಮಾಡಿರುವ ಹಾಗೂ ಬಣ್ಣ ಲೇಪಿತವಾದಂತಹ ಗಣಪತಿ ವಿಗ್ರಹಗಳ ಮಾರಾಟ ಮಾಡುವುದು ಕಂಡುಬಂದಲ್ಲಿ ಕಾನೂನು ಕ್ರಮ ಕೈಗೊಳ್ಳಲು ಜಿಲ್ಲೆಯ ಎಲ್ಲಾ ಸ್ಥಳೀಯ ಸಂಸ್ಥೆಗಳಿಗೆ  ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ ಅವರು ಸೂಚನೆ ನೀಡಿದ್ದಾರೆ.

error: Content is protected !!