ಬೆಳ್ಳೂಡಿಯಲ್ಲಿ ಭಕ್ತಿ ಸಮರ್ಪಣಾ ಕಾರ್ಯಕ್ರಮ

ಬೆಳ್ಳೂಡಿಯಲ್ಲಿ  ಭಕ್ತಿ ಸಮರ್ಪಣಾ ಕಾರ್ಯಕ್ರಮ

ಮಲೇಬೆನ್ನೂರು, ಸೆ. 12- ಸಿರಿಗೆರೆಯ ಲಿಂಗೈಕ್ಯ ಜಗದ್ಗುರುಗ ಳಾದ ಶ್ರೀ ಶಿವಕುಮಾರ ಶಿವಾ ಚಾರ್ಯರ ಮಹಾ ಸ್ವಾಮೀಜಿ ಅವರ 31ನೇ ಶ್ರದ್ಧಾಂಜಲಿ ಸಮಾರಂಭದ ದಾಸೋಹಕ್ಕೆ ಹರಿಹರ ತಾಲ್ಲೂಕಿನಿಂದ ಭಕ್ತಿ ಸಮರ್ಪಣೆ ಕಾರ್ಯಕ್ರಮವು ಇದೇ ದಿನಾಂಕ 15ರ ಶುಕ್ರವಾರ ಬೆಳಿಗ್ಗೆ 11 ಕ್ಕೆ ಬೆಳ್ಳೂಡಿಯಲ್ಲಿ ನಡೆಯಲಿದೆ. ಕಾರ್ಯಕ್ರಮದ ಅಂಗವಾಗಿ ಅಂದು ಬೆಳಿಗ್ಗೆ 10 ಕ್ಕೆ ರಕ್ತದಾನ ಹಾಗೂ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಬೆಳ್ಳೂಡಿ ಗ್ರಾಮಸ್ಥರು ಆರೋಗ್ಯ ಇಲಾಖೆಯ ಸಹಯೋಗದಲ್ಲಿ ಹಮ್ಮಿಕೊಂಡಿದ್ದಾರೆಂದು ಹರಿಹರ ತಾ. ಸಾಧು ವೀರಶೈವ ಸಮಾಜದ ಅಧ್ಯಕ್ಷ ಅಮರಾವತಿ ಮಹಾದೇವಪ್ಪ ತಿಳಿಸಿದ್ದಾರೆ.

error: Content is protected !!