ಅ.1ರಂದು ಉಪ್ಪಾರ ಮಹಾಸಭಾದಿಂದ ಪ್ರತಿಭಾ ಪುರಸ್ಕಾರ

ದಾವಣಗೆರೆ, ಸೆ.26- ಕರ್ನಾಟಕ ರಾಜ್ಯ ಉಪ್ಪಾರ ಮಹಾಸಭಾದಿಂದ ರಾಜ್ಯ ಮಟ್ಟದ ಪ್ರತಿಭಾ ಪುರಸ್ಕಾರ ಹಾಗೂ ಶಾಸಕ ಪುಟ್ಟರಂಗಶೆಟ್ಟಿ ಅವರಿಗೆ ಗೌರವ ಸನ್ಮಾನ ಕಾರ್ಯಕ್ರಮವನ್ನು ಅಕ್ಟೋಬರ್ 1ರಂದು ಹುಬ್ಬಳ್ಳಿಯ ಅಮರಗೋಳದಲ್ಲಿನ ವಿದ್ಯಾಧಿರಾಜ ಕಲ್ಯಾಣ ಮಂಪಟದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಮಹಾಸಭಾದ ರಾಜ್ಯ ಪ್ರಧಾನ ಕಾರ್ಯದರ್ಶಿ ಭರತ್ ಎಸ್.ಮೈಲಾರ್ ತಿಳಿಸಿದ್ದಾರೆ.

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎಸ್ಸೆಸ್ಸೆಲ್ಸಿ, ಪಿಯುಸಿ ವಿದ್ಯಾರ್ಥಿಗಳ ಜೊತೆ ಹೆಚ್ಚು ಅಂಕ ಪಡೆದ ಪದವಿ ವಿದ್ಯಾರ್ಥಿಗಳಿಗೂ ಗೌರವಿಸಲಾಗುವುದು. ಇದೇ ವೇಳೆ ರಾಜ್ಯಮಟ್ಟದ ಮಹಿಳಾ ನೌಕರರ ಸಮಾವೇಶವನ್ನೂ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ಕಾರ್ಯಕ್ರಮಲ್ಲಿ ವಿವಿಧ ಮಠಾಧೀಶರು ಆಗಮಿಸಲಿದ್ದಾರೆ. ಸಚಿವರುಗಳಾದ ಮಧು ಬಂಗಾರಪ್ಪ, ಸತೀಶ್ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್, ಶಿವರಾಜ ತಂಗಡಗಿ, ಸಂತೋಷ್ ಲಾಡ್ ಸೇರಿದಂತೆ ಸ್ಥಳೀಯ ಶಾಸಕರುಗಳು ಆಗಮಿಸಲಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ರಾಜ್ಯಾಧ್ಯಕ್ಷ ವಿಷ್ಣು ರಾ ಲಾತೂರ್, ರಾಜ್ಯ ಉಪಾಧ್ಯಕ್ಷ ಈಶ್ವರಪ್ಪ ಶಿರಕೋಳ, ಗೌರವ ಸಲಹೆಗಾರ ರಾಮಕೃಷ್ಣ ಬಬಲಿ, ಮಂಜುನಾಥ್ ಇತರರು ಇದ್ದರು.

error: Content is protected !!