1 ರಂದು ರಾಜ್ಯ ಸರ್ಕಾರಿ ನೌಕರರ ವಿಶೇಷ ಸಭೆ

ದಾವಣಗೆರೆ, ಸೆ. 26- ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಕಬ್ಬನ್ ಉದ್ಯಾನವನ, ಬೆಂಗಳೂರು ಇದರ 2022 ರ ಉಪವಿಧಿಗಳನ್ನು ತಿದ್ದುಪಡಿ ಮಾಡಲು ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರ ಅಧ್ಯಕ್ಷತೆಯಲ್ಲಿ ವರ್ಚ್ಯುವಲ್ ವಿಧಾನದ ಮೂಲಕ ಸರ್ವ ಸದಸ್ಯರ ವಿಶೇಷ ಮಹಾಸಭೆಯನ್ನು ಆಯೋಜಿಸಲಾಗಿದೆ.

ಅಕ್ಟೋಬರ್ 1 ರಂದು ಬೆಳಿಗ್ಗೆ 11 ಗಂಟೆಗೆ ಕೊಪ್ಪಳ ಜಿಲ್ಲೆಯ ಹಿರೇಸಿಂದೋಗಿ ರಸ್ತೆಯಲ್ಲಿರುವ ಮಹಾವೀರ ಸಮುದಾಯ ಭವನದಲ್ಲಿ ಸಭೆಯನ್ನು ಏರ್ಪಡಿಸಿದೆ ಎಂದು ಸಂಘದ ದಾವಣಗೆರೆ ಜಿಲ್ಲಾಧ್ಯಕ್ಷ ವೀರೇಶ್ ಎಸ್. ಒಡೇನಪುರ ತಿಳಿಸಿದ್ದಾರೆ.

error: Content is protected !!