ನಗರದಲ್ಲಿ ಇಂದು ಶಿವಾನುಭವ ಗೋಷ್ಠಿ

ನಗರದಲ್ಲಿ ಇಂದು ಶಿವಾನುಭವ ಗೋಷ್ಠಿ

ಬಾಡಾ ಕ್ರಾಸ್‌ನಲ್ಲಿರುವ ಶ್ರೀ ವೀರೇಶ್ವರ ಪುಣ್ಯಾಶ್ರಮದಲ್ಲಿ  ಇಂದು ಬೆಳಿಗ್ಗೆ 10 ಗಂಟೆಗೆ  271ನೇ ಅನಂತನ ಹುಣ್ಣಿಮೆ, ಶಿವಾನುಭವ ಗೋಷ್ಠಿ ಮತ್ತು ಸಂಗೀತ ಕಾರ್ಯಕ್ರಮ ನಡೆಯಲಿದೆ. ಸಾನ್ನಿಧ್ಯವನ್ನು ಶ್ರೀ ಓಂಕಾರ ಶಿವಾಚಾರ್ಯ ಸ್ವಾಮೀಜಿ, ಶ್ರೀ ಕಲ್ಲಯ್ಯಜ್ಜ ವಹಿಸುವರು. ಅಧ್ಯಕ್ಷತೆಯನ್ನು ಅಥಣಿ ಎಸ್. ವೀರಣ್ಣ ವಹಿಸುವರು. ಮುಖ್ಯ ಅತಿಥಿಗಳಾಗಿ ಎ.ಹೆಚ್‌. ಶಿವಮೂರ್ತಿ ಸ್ವಾಮಿ ಉಪ ಸ್ಥಿತರಿರುವರು. ಮೈಸೂರಿನ ಹಿಂದೂಸ್ತಾನಿ ಸಂಗೀತ ಗಾಯಕ ವಿದ್ವಾನ್ ಮೃತ್ಯುಂಜಯ ಕಾಚಾಪುರ ಅವರಿಂದ ಸಂಗೀತ ಸೇವೆ ನಡೆಯಲಿದೆ.

error: Content is protected !!