ಬೆಳಗಾವಿಯಲ್ಲಿ ನಾಳೆ ಕುರುಬ ಸಮಾವೇಶ

ಹೂವಿನಹಡಗಲಿ, ಅ.1- ಶೆಫರ್ಡ್ ಇಂಡಿಯಾ ಇಂಟರ್‌ನ್ಯಾಷನಲ್ ವತಿಯಿಂದ ನಾಡಿದ್ದು ದಿನಾಂಕ 3 ರ ಮಂಗಳವಾರ ಬೆಳಗಾವಿಯಲ್ಲಿ ರಾಷ್ಟ್ರಮಟ್ಟದ ಕುರುಬ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಪ್ರದೇಶ ಕುರುಬರ ಸಂಘದ ನಿರ್ದೇಶಕ ಬಿ. ಹನುಮಂತಪ್ಪ ತಿಳಿಸಿದ್ದಾರೆ.

ಪತ್ರಿಕಾ ಹೇಳಿಕೆ ನೀಡಿರುವ ಅವರು, ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಜನಿಸಿದ ಪವಿತ್ರ ಭೂಮಿಯಲ್ಲಿ ಹಮ್ಮಿಕೊಂಡಿರುವ ಬೃಹತ್ ರಾಷ್ಟ್ರೀಯ ಸಮಾವೇಶದಲ್ಲಿ ದೇಶದ ನಾನಾ ಭಾಗಗಳ ಕುರುಬ ಸಮಾಜ ಬಾಂಧವರು ಪಾಲ್ಗೊಳ್ಳಲಿದ್ದಾರೆ ಎಂದು ಅವರು ಹೇಳಿದ್ದಾರೆ.

ಸಮಾವೇಶದಲ್ಲಿ ಕುರುಬ ಸಮಾಜದ ರಾಜಕೀಯ, ಶೈಕ್ಷಣಿಕ ಅಭಿವೃದ್ಧಿ ಹಾಗೂ ಮುನ್ನೋಟ ಕುರಿತು ಚಿಂತನ, ಮಂಥನ ನಡೆ ಯಲಿದೆ. ಹಿಂದುಳಿದ ಬುಡಕಟ್ಟು ಜನಾಂಗದ ಮುಂದಿನ ಪೀಳಿಗೆಯ ಭವಿಷ್ಯಕ್ಕಾಗಿ ಇಂತಹ ಸಮಾವೇಶಗಳು ಅವಶ್ಯವಾಗಿವೆ ಎಂದಿದ್ದಾರೆ.

2ನೇ ಬಾರಿಗೆ ಮುಖ್ಯಮಂತ್ರಿಯಾಗಿರುವ ಸಿದ್ಧರಾಮಯ್ಯ ಅವರನ್ನು ಸಮಾವೇಶದಲ್ಲಿ ವಿಶೇಷವಾಗಿ ಸನ್ಮಾನಿಸಲಾಗುವುದು. ವಿಧಾನ ಪರಿಷತ್ ಸದಸ್ಯ ಹೆಚ್. ವಿಶ್ವನಾಥ್, ಮಾಜಿ ಸಚಿವರೂ, ಸಮಾಜದ ಮುಖಂಡರಾದ ಹೆಚ್.ಎಂ. ರೇವಣ್ಣ ಸೇರಿದಂತೆ ಸಮಾಜದ ಅನೇಕ ಗಣ್ಯರು ಭಾಗವಹಿಸಲಿದ್ದಾರೆ.

error: Content is protected !!