ಕಿರು ಸಾಲ ಸೌಲಭ್ಯಕ್ಕಾಗಿ ಬೀದಿ ಬದಿ ವ್ಯಾಪಾರಿಗಳಿಂದ ಅರ್ಜಿ ಆಹ್ವಾನ

ದಾವಣಗೆರೆ, ಅ. 8  – ಕೇಂದ್ರ ಸರ್ಕಾರದ ಆತ್ಮ ನಿರ್ಭರ್ ಯೋಜನೆಯಡಿ ಬೀದಿ ಬದಿ ವ್ಯಾಪಾರಿಗಳು ವ್ಯಾಪಾರ ವಿಸ್ತರಿಸಿಕೊಳ್ಳಲು ಬ್ಯಾಂಕ್ ಮೂಲಕ ಕಡಿಮೆ ಬಡ್ಡಿ ದರದಲ್ಲಿ ಕಿರು ಸಾಲ ಸೌಲಭ್ಯ ಕಲ್ಪಿಸಲು ಅರ್ಜಿ ಆಹ್ವಾನಿಸಲಾಗಿದೆ. 

ಬೀದಿ ಬದಿ ವ್ಯಾಪಾರಿಗಳಿಗೆ ಹಾಗೂ ಹಾಲು ಮಾರಾಟಗಾರರಿಗೆ ಮತ್ತು ಪತ್ರಿಕಾ ವಿತರಕರಿಗೂ ಆರ್ಥಿಕ ಸುಭದ್ರತೆಗಾಗಿ 3 ಕಂತುಗಳಲ್ಲಿ ಸಾಲ ಸೌಲಭ್ಯವನ್ನು ಕಲ್ಪಿಸಲಾಗುವುದು. ಮೊದಲ ಕಂತಿನಲ್ಲಿ ರೂ 10,000 ಸಾಲ ನೀಡಿ 12 ತಿಂಗಳ ಅವಧಿಯಲ್ಲಿ ಸಾಲ ಮರು ಪಾವತಿ ಮಾಡಿದಲ್ಲಿ ರೂ 20,000 ಸಾಲ ನೀಡಲಾಗುವುದು. ಪಡೆದ ಸಾಲವನ್ನು 18 ತಿಂಗಳ ಅವಧಿಯಲ್ಲಿ ಸಾಲ ಮರು ಪಾವತಿ ಮಾಡಿದಲ್ಲಿ ರೂ 50,000  ಸಾಲ ಸೌಲಭ್ಯ ನೀಡಲಾಗುವುದು.

ಸಾಲ ಸೌಲಭ್ಯದ ಜೊತೆಗೆ ಕ್ಯೂ ಆರ್ ಕೋಡ್ ಮಾಡಿಸಿಕೊಳ್ಳಬೇಕು, ನಗರ ಸ್ಥಳೀಯ ಸಂಸ್ಥೆಗಳಿಂದ  ಕೈಗೊಳ್ಳಲಾಗುವ ಸಮೀಕ್ಷೆಗೊಳಗಾಗಿ ಸಾಮಾಜಿಕ ಭದ್ರತಾ ಯೋಜನೆಗಳ ಸೌಲಭ್ಯವನ್ನು ಪಡೆದುಕೊಳ್ಳಬೇಕು ಎಂದು ಹರಿಹರ ನಗರ ಸಭೆ ಪೌರಾಯುಕ್ತ ಬಸವರಾಜಪ್ಪ ತಿಳಿಸಿದ್ದಾರೆ.

error: Content is protected !!