ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಯೋಜನೆಗಳಿಗೆ ಅರ್ಜಿ

ದಾವಣಗೆರೆ, ಅ.8- ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಪ್ರಸಕ್ತ  ಸಾಲಿಗೆ ಅರಿವು ಶೈಕ್ಷಣಿಕ ಸಾಲ ಯೋಜನೆ (ಹೊಸದು) (ನವೀಕರಣ), ಗಂಗಾ ಕಲ್ಯಾಣ ನೀರಾವರಿ ಯೋಜನೆ, ಸ್ವಯಂ ಉದ್ಯೋಗ, ನೇರ ಸಾಲ ಮತ್ತು ಸಹಾಯಧನ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ಶಿಕ್ಷಣ ವ್ಯಾಸಂಗಕ್ಕೆ ಆರ್ಥಿಕ ನೆರವು, ಸ್ವಯಂ ಉದ್ಯೋಗ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆಗೆ   ಹಿಂದುಳಿದ ವರ್ಗಗಳ ಪ್ರವರ್ಗ-1 ರ ಅರ್ಜಿದಾರರಿಂದ ಅರ್ಜಿ ಆಹ್ವಾನಿಸಲಾಗಿದೆ.

ಸಾಲ ಸೌಲಭ್ಯ ಪಡೆಯಲು ನಿಗದಿತ ಅರ್ಜಿ ನಮೂನೆಗಳಲ್ಲಿ ಭರ್ತಿ ಮಾಡಿ ಅಗತ್ಯ ದಾಖಲಾತಿಗಳೊಂದಿಗೆ ನವೆಂಬರ್ 2 ರೊಳಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ ನಿಯಮಿತ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ಕಚೇರಿ ಅಥವಾ ನಿಗಮದ ವೆಬ್‍ಸೈಟ್ https://ambigaradevelopment.karnataka.gov.in    ನ್ನು ಸಂಪರ್ಕಿಸಬಹುದು.

ಅರ್ಜಿ ನಮೂನೆಯನ್ನು ನಿಗಮದ ವೆಬ್‍ಸೈಟ್‍ನಲ್ಲಿ ಹಾಗೂ ಉಚಿತವಾಗಿ ಜಿಲ್ಲಾ ಕಚೇರಿಯಲ್ಲಿ ಪಡೆಯಬಹುದು. ಜಿಲ್ಲಾ ನಿಗಮದ ಕಚೇರಿ ದೂರವಾಣಿ ಸಂಖ್ಯೆ 08192-230934 ಕ್ಕೆ ಸಂಪರ್ಕಿಸಬಹುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಸಾತ್ವಿಕ್ ತಿಳಿಸಿದ್ದಾರೆ.

error: Content is protected !!