ನಗರದಲ್ಲಿ ಇಂದು ಗ್ರಾಹಕರ ಸಂರಕ್ಷಣಾ ಕಾಯ್ದೆ-2019 ಕುರಿತು ಉಪನ್ಯಾಸ

 ಜಿಲ್ಲಾ ವಕೀಲರ ಸಂಘದಿಂದ ಉಪನ್ಯಾಸ ಮಾಲಿಕೆ-2 ರಡಿ ಗ್ರಾಹಕರ ಸಂರಕ್ಷಣಾ ಕಾಯ್ದೆ-2019 ಕುರಿತು ಉಪನ್ಯಾಸವು ಇಂದು ಮಧ್ಯಾಹ್ನ 2.30 ಗಂಟೆಗೆ ವಕೀಲರ ಸಾಂಸ್ಕೃತಿಕ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮವನ್ನು ನ್ಯಾಯಾಧೀಶರಾದ ಶ್ರೀಮತಿ ರಾಜೇಶ್ವರಿ ಎನ್‌. ಹೆಗಡೆ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಜಿಲ್ಲಾಧಿಕಾರಿ ಡಾ. ವೆಂಕಟೇಶ್‌ ಎಂ.ವಿ., ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಶ್ರೀಮತಿ ಉಮಾ ಪ್ರಶಾಂತ್ ಆಗಮಿಸುವರು.

ಕಾರ್ಯಕ್ರಮದಲ್ಲಿ ಜಿಲ್ಲಾ ಗ್ರಾಹಕರ ಆಯೋಗದ ಮಹಾಂತೇಶ್ ಈರಪ್ಪ ಶಿಗ್ಲಿ ಅವರಿಂದ ಉಪನ್ಯಾಸ ನಡೆಯುವುದು. ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಲ್‌.ಎಚ್‌. ಅರುಣಕುಮಾರ್‌ ಅಧ್ಯಕ್ಷತೆ ವಹಿಸುವರು.

error: Content is protected !!