ಕಾಳಿಕಾದೇವಿ ವಿಶ್ವಕರ್ಮ ದೇವಸ್ಥಾನದಲ್ಲಿ ನಾಳೆಯಿಂದ ದಸರಾ ಮಹೋತ್ಸವ

ಕಾಳಿಕಾದೇವಿ ವಿಶ್ವಕರ್ಮ ದೇವಸ್ಥಾನದಲ್ಲಿ ನಾಳೆಯಿಂದ ದಸರಾ ಮಹೋತ್ಸವ

ದಾವಣಗೆರೆ, ಅ. 13- ನವರಾತ್ರಿ ಪ್ರಯುಕ್ತ ನಗರದ ಕಾಳಿಕಾದೇವಿ ರಸ್ತೆಯಲ್ಲಿರುವ ಶ್ರೀ ಕಾಳಿಕಾದೇವಿ ವಿಶ್ವಕರ್ಮ ದೇವಸ್ಥಾನದಲ್ಲಿ ನಾಡಿದ್ದು ದಿನಾಂಕ 15ರ ಭಾನುವಾರ ಪ್ರಾತಃಕಾಲ ಗಣಪತಿ ಪೂಜೆ, ಪುಣ್ಯಾಹ ವಾಚನ ಘಟಸ್ಥಾಪನೆ ಮತ್ತು ಧ್ವಜಾರೋಹಣ ನಡೆಯುವುದು. ಇದೇ ದಿನಾಂಕ 15 ರಿಂದ 24ರ ಮಂಗಳವಾರವರೆಗೆ ಶ್ರೀ ಅಮ್ಮನವರಿಗೆ ವೇದೋಕ್ತ ಪಂಚಾಮೃತಾಭಿಷೇಕ, ಅಲಂಕಾರ ಮತ್ತು ದುರ್ಗಾಹೋಮಗಳು ನಡೆಯಲಿವೆ. ಪ್ರತಿದಿನ ಸಂಜೆ 6 ರಿಂದ 7 ರವರೆಗೆ ಶ್ರೀ ಕಾಳಿಕಾದೇವಿ ಮಹಿಳಾ ಭಜನಾ ಮಂಡಳಿಯಿಂದ  ಲಲಿತಾ ಸಹಸ್ರನಾಮ ಪಾರಾಯಣ ಮತ್ತು ಸಂಜೆ 7 ರಿಂದ 9 ರವರೆಗೆ ಟಿ. ಪರಮೇಶ್ವರಚಾರ್‌ ಮತ್ತು ಎನ್. ರಮೇಶಚಾರ್‌ ಅವರಿಂದ ಶ್ರೀ ದೇವಿಯ ಪಾರಾಯಣ ನಡೆಯಲಿದೆ.

error: Content is protected !!