ಬ್ಯಾಂಕ್, ಅಂಚೆ ಕಛೇರಿ ಖಾತೆಗೆ ಆಧಾರ್ ಜೋಡಣೆ

ಮಲೇಬೆನ್ನೂರು, ಅ. 16 – ಸಾಮಾಜಿಕ ಭದ್ರತಾ ಯೋಜನೆ ಅಡಿ ಮಲೆಬೆನ್ನೂರು ಹೋಬಳಿಯಲ್ಲಿ ಪಿಂಚಣಿ ಪಡೆಯುತ್ತಿರುವ ಫಲಾನುಭವಿಗಳು ಬ್ಯಾಂಕ್ ಖಾತೆ ಹಾಗೂ ಆಧಾರ್ ನೊಂದಿಗೆ ತಾವು ಖಾತೆ ಹೊಂದಿರುವ ಬ್ಯಾಂಕಿಗೆ ಅಥವಾ ಅಂಚೆ ಕಚೇರಿಗೆ ಸಂಪರ್ಕಿಸಿ ಎನ್‌ಪಿಸಿಐ (NPCI) ಜೋಡಣೆ ಮಾಡಿಕೊಳ್ಳಬೇಕೆಂದು ಉಪ ತಹಶೀಲ್ದಾರ್ ಆರ್. ರವಿ ತಿಳಿಸಿದ್ದಾರೆ. 

ಸರ್ಕಾರದಿಂದ ವೃದ್ಯಾಪ ವೇತನ, ವಿಧವಾ ವೇತನ, ಅಂಗವಿಕಲ ವೇತನ, ಸಂಧ್ಯಾ ಸುರಕ್ಷಾ, ಮನಸ್ವಿನಿ ಮತ್ತು ಮೈತ್ರಿ ಮಾಸಿಕ ಪಿಂಚಣಿ ಪಡೆಯುತ್ತಿದ್ದರೆ ಕೆಲವೊಂದು ತಾಂತ್ರಿಕ ಕಾರಣಗಳಿಂದ ಆಧಾರ್ ನಂಬರ್ ಫಲಾನುಭವಿ ಗಳ ಬ್ಯಾಂಕ್ ಹಾಗೂ ಅಂಚೆ ಕಛೇರಿ ಖಾತೆಯೊಂದಿಗೆ ಜೋಡಣೆ ಆಗಿರುವುದಿಲ್ಲ, ಈ ತಿಂಗಳ ಅಂತ್ಯದೊಳಗೆ ಆಧಾರ್ ಜೋಡಣೆ ಮಾಡಿಸುವಂತೆ ಅವರು ತಿಳಿಸಿದ್ದಾರೆ.

error: Content is protected !!