ನಾಳೆ ದೆಹಲಿಯ ಜಂತರ್-ಮಂತರ್‌ನಲ್ಲಿ ಕರವೇ ಪ್ರತಿಭಟನೆ

ದಾವಣಗೆರೆ, ಅ. 16- ಕಾವೇರಿ ವಿಚಾರವಾಗಿ  ಪ್ರಧಾನ ಮಂತ್ರಿಗಳು ಮಧ್ಯ ಪ್ರವೇಶಿಸಬೇಕು ಎಂದು ಆಗ್ರಹಿಸಿ ಹಮ್ಮಿಕೊಂಡಿರುವ ದೆಹಲಿ ಚಲೋ ಕಾರ್ಯಕ್ರಮದಲ್ಲಿ ಭಾಗವಹಿಸಲು ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕದ ಪದಾಧಿಕಾರಿಗಳು ನಗರದ ರೈಲ್ವೆ ನಿಲ್ದಾಣದಿಂದ ಸಂಪರ್ಕ ಕ್ರಾಂತಿ  ರೈಲಿನಲ್ಲಿ ಇಂದು ದೆಹಲಿಗೆ ಪಯಣ ಬೆಳೆಸಿದರು. 

ಈ ಸಂದರ್ಭದಲ್ಲಿ ಮಾತನಾಡಿದ ಕರವೇ ಜಿಲ್ಲಾಧ್ಯಕ್ಷ ಎಂ.ಎಸ್. ರಾಮೇಗೌಡ ಮಾತನಾಡಿ, ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ಅವರ ನೇತೃತ್ವದಲ್ಲಿ   ದಿನಾಂಕ 18 ಬೆಳಗ್ಗೆ 11 ಗಂಟೆಗೆ ದೆಹಲಿಯ ಜಂತರ್ ಮಂತರ್ ನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಶ್ರೀಮತಿ ಬಸಮ್ಮ.ಜಿಲ್ಲಾ ಉಪಾಧ್ಯಕ್ಷರಾದ ಗಿರೀಶ್ ಕುಮಾರ್. ಜಿ.ಎಸ್. ಸಂತೋಷ್, ಮಹೇಶ್ವರಪ್ಪ, ದಕ್ಷಿಣ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಜಬಿವುಲ್ಲಾ, ಜಿಲ್ಲಾ ಸಂಚಾಲಕ ಎಂ.ಡಿ. ರಫೀಕ್, ದಾದಾಪೀರ್. ಆಟೋ ರಫೀಕ್. ದಾದೇಷ್, ಭಾಷಾ ಸಾಬ್, ಹರಿಹರ ತಾಲೂಕು ಅಧ್ಯಕ್ಷ ರಾಜೇಶ್ ಮುಖ್ಯಸ್ಥರು ಉಪಸ್ಥಿತರಿದ್ದರು.

error: Content is protected !!