ದಾವಣಗೆರೆ, ಅ. 17- ಹೆಣ್ಣು ಭ್ರೂಣ ಹತ್ಯೆ ನಿಯಂತ್ರಣ ಮತ್ತು ಮಕ್ಕಳ ಹಕ್ಕುಗಳ ರಕ್ಷಣೆಗಾಗಿ `ಆರುಷಿ’ ಹೆಸರಿನಲ್ಲಿ ಯೋಜನೆಯನ್ನು ಸಿದ್ಧಪಡಿಸಿ, ಜಾರಿಗೆ ತರುವಂತೆ ರಾಜ್ಯ ಮತ್ತು ಕೇಂದ್ರ ಸರ್ಕಾರವನ್ನು ಆಗ್ರಹಿಸಿ ಹಮ್ಮಿಕೊಂಡಿರುವ ಪಾದಯಾತ್ರೆ ನಾಡಿದ್ದು, ದಿನಾಂಕ 19 ರಂದು ನಗರಕ್ಕೆ ಆಗಮಿಸಲಿದೆ ಎಂದು ಆರುಷಿ ಯೋಜನೆಯ ಅಭಿಮಾನಿ ಬಳಗದ ಡಿ. ಮಂಜಾನಾಯ್ಕ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಆರುಷಿ ಯೋಜನೆಯನ್ನು ಜಾರಿಗೆ ತರುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿ, ಸೂಕ್ತ ವರದಿಯನ್ನು ಕೇಂದ್ರ ಸರ್ಕಾರಕ್ಕೆ ನೀಡುವಂತೆ ಒತ್ತಾಯಿಸಿ ಕನ್ಯಾಕುಮಾರಿಯಿಂದ ದೆಹಲಿಯವರೆಗೆ ಪಾದಯಾತ್ರೆ ಮಾಡುತ್ತಿದ್ದು, 19 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಸಂಗೊಳ್ಳಿ ರಾಯಣ್ಣ ವೃತ್ತದ ಮೂಲಕ ಹರಿಹರದ ಕಡೆ ಸಾಗಲಿದೆ ಎಂದರು.
ಈ ವೇಳೆ ಹೊನ್ನಾಳಿ ತಾಲ್ಲೂಕು ಸೇರಿದಂತೆ, ಜಿಲ್ಲೆಯ ಸರ್ವರೂ ಆಗಮಿಸಿ ಪಾದಯಾತ್ರೆಗೆ ಬೆಂಬಲಿಸಬೇಕು. ಜಿಲ್ಲೆಯ ಯುವ ಸಂಘಟ ನೆಗಳ ಎಲ್ಲಾ ಜನಪ್ರತಿನಿಧಿಗಳು, ಮಹಿಳಾ ಸಂಘಟನೆಗಳು ಮತ್ತು ವಿವಿಧ ಸಂಘಟನೆಗಳು ಪದಾಧಿಕಾರಿಗಳು, ಕಾರ್ಯಕರ್ತರು ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಸುರೇಶ್ ನಾಯ್ಕ, ಹೆಚ್.ಎಸ್. ತೇಜಸ್ ಉಪಸ್ಥಿತರಿದ್ದರು.