ಜಿಲ್ಲಾ ಯೋಗಾಸನ ಸ್ಪರ್ಧೆಯಲ್ಲಿ ವೈಷ್ಣವಿ ರಾಜ್ಯ ಮಟ್ಟಕ್ಕೆ ಆಯ್ಕೆ

ಜಿಲ್ಲಾ ಯೋಗಾಸನ ಸ್ಪರ್ಧೆಯಲ್ಲಿ  ವೈಷ್ಣವಿ ರಾಜ್ಯ ಮಟ್ಟಕ್ಕೆ ಆಯ್ಕೆ

ದಾವಣಗೆರೆ, ಅ. 27-  ಯೋಗಾಸನ ಸ್ಪರ್ಧೆಯಲ್ಲಿ ಈಶ್ವರಮ್ಮ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಯ ವಿದ್ಯಾರ್ಥಿನಿ ವೈಷ್ಣವಿ ಕೆ. ಆವಜಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ ತಾಲ್ಲೂಕು ಸಿರಿಗೆರೆಯ ತರಳಬಾಳು ಜಗದ್ಗುರು ಮಠದಲ್ಲಿ ನಡೆದ 17 ವರ್ಷದ ವಯೋಮಿತಿಯ ಬಾಲಕಿಯರ ಬೆಂಗಳೂರು ವಿಭಾಗ ಮಟ್ಟದ ಯೋಗಾಸನ ಸ್ಪಧೆಯಲ್ಲಿ ವೈಷ್ಣವಿ ಕೆ.ಆವಾಜಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.

ವಿದ್ಯಾರ್ಥಿನಿಯ ಸಾಧನೆಗೆ ಈಶ್ವರಮ್ಮ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಜಾತ ಕೃಷ್ಣನ್, ಕಾರ್ಯದರ್ಶಿ ಉಷಾ ರಂಗನಾಥ್, ಖಜಾಂಚಿ ಎ.ಪಿ.ಸುಜಾತ, ಪ್ರಾಂಶುಪಾಲ ಕೆ.ಎಸ್.ಪ್ರಭುಕುಮಾರ್, ಉಪಪ್ರಾಂಶುಪಾಲರಾದ ಜಿ.ಎಸ್. ಶಶಿರೇಖಾ, ದೈಹಿಕ ಶಿಕ್ಷಕರಾದ ಕೆ.ರವಿ, ನಾಗರಾಜ್ ಉತ್ತಂಗಿ, ಎಂ.ಪ್ರಸನ್ನ  ಅಭಿನಂದಿಸಿದ್ದಾರೆ.

error: Content is protected !!