ಕನ್ನಡ ಸುವರ್ಣ ಸಿರಿ ಪ್ರಶಸ್ತಿಗೆ ಆಹ್ವಾನ

ದಾವಣಗೆರೆ, ಅ. 29-  ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಆಶ್ರಯದಲ್ಲಿ ಕನ್ನಡ ನಾಡು, ನುಡಿ, ಸಾಹಿತ್ಯ, ಸಂಗೀತ, ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಮೈಸೂರು ರಾಜ್ಯ ಕರ್ನಾಟಕ ರಾಜ್ಯವಾಗಿ ಮರು ನಾಮಕರಣವಾಗಿ ಐವತ್ತು ವರ್ಷಗಳು ಪೂರೈಸಿದ ಕರ್ನಾಟಕ ಸುವರ್ಣ ಮಹೋತ್ಸವದ ಅಂಗವಾಗಿ `ಕನ್ನಡ ಸುವರ್ಣ ಸಿರಿ’ ರಾಜ್ಯ ಪ್ರಶಸ್ತಿ ಘೋಷಿಸಿ ವಿತರಿಸಲಾಗುವುದು ಎಂದು ಕಲಾಕುಂಚ ಸಂಸ್ಥೆಯ ಸಂಸ್ಥಾಪಕ ಸಾಲಿಗ್ರಾಮ ಗಣೇಶ್ ಶೆಣೈ ತಿಳಿಸಿದ್ದಾರೆ. 

ಸಾರ್ವಜನಿಕವಾಗಿ ಆಸಕ್ತ, ಕನ್ನಡಪರ ಸಾಧಕರು ನಾಡಿದ್ದು ದಿನಾಂಕ 31ರೊಳಗೆ ತಮ್ಮ ಸಾಧನೆ ಕುರಿತಂತೆ ವ್ಯಾಟ್ಸಾಪ್ ಸಂಖ್ಯೆಗೆ ಕಳುಹಿಸಬಹುದಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ ಕೆ.ಹೆಚ್. ಮಂಜುನಾಥ್ ತಿಳಿಸಿದ್ದಾರೆ.  ವಿವರಕ್ಕೆ  : 9538732777 ಈ ವ್ಯಾಟ್ಸಾಪ್ ಸಂಖ್ಯೆಗೆ ಸಂಪರ್ಕಿಸಬಹುದು ಎಂದು ದಾವಣಗೆರೆ ಕಲಾಕುಂಚ ಎಂ.ಸಿ.ಸಿ.ಶಾಖೆಯ ಅಧ್ಯಕ್ಷರಾದ ಶ್ರೀಮತಿ ಪ್ರಭಾ ರವೀಂದ್ರ ವಿನಂತಿಸಿದ್ದಾರೆ.

error: Content is protected !!