ಗಣಿ ಇಲಾಖೆಯ ಹಿರಿಯ ಅಧಿಕಾರಿ ಪ್ರತಿಮಾ ಹತ್ಯೆ

ಬೆಂಗಳೂರು, ನ. 5 – ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹಿರಿಯ ಭೂ ವಿಜ್ಞಾನಿ ಪ್ರತಿಮಾ ಅವರನ್ನು ಶನಿವಾರ ರಾತ್ರಿ‌ ಚಾಕುವಿನಿಂದ ಇರಿದು ಕೊಲೆ‌ ಮಾಡಲಾಗಿದೆ.

ಶಿವಮೊಗ್ಗದ ತೀರ್ಥಹಳ್ಳಿ ಮೂಲದ ಪ್ರತಿಮಾ, ಬೆಂಗಳೂರಿನ ದೊಡ್ಡಕಲ್ಲಸಂದ್ರದ ಅಪಾರ್ಟ್‌ ಮೆಂಟ್ ಸಮುಚ್ಚಯದ ಫ್ಲ್ಯಾಟ್‌ನಲ್ಲಿ ಒಬ್ಬರೇ ವಾಸವಿದ್ದರು. ಶನಿವಾರ ರಾತ್ರಿ ಚಾಲಕ, ಪ್ರತಿಮಾ‌ ಅವರನ್ನು ಮನೆಗೆ ಬಿಟ್ಟು ಹೋಗಿದ್ದರು. ಭಾನುವಾರ ಬೆಳಿಗ್ಗೆ ಸಹೋದರ ಕರೆ ಮಾಡಿದರೂ ಪ್ರತಿಮಾ‌ ಕರೆ ಸ್ವೀಕರಿಸಿರಲಿಲ್ಲ. ಅನುಮಾನಗೊಂಡ ಸಂಬಂಧಿಕರು ಮನೆಗೆ ಬಂದು‌ ನೋಡಿದಾಗ ಕೊಲೆ ನಡೆದಿರುವುದು ಗೊತ್ತಾಗಿದೆ.

ಈ ಬಗ್ಗೆ ಸುಬ್ರಹ್ಮಣ್ಯಪುರ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ. ಆರೋಪಿಗಳ ಪತ್ತೆಗೆ ವಿಶೇಷ ತಂಡ‌ ರಚಿಸಲಾಗಿದೆ ಎಂದು ಪೊಲೀಸ್ ಹಿರಿಯ ಅಧಿಕಾರಿ ಹೇಳಿದರು. ಈ ಬಗ್ಗೆ ಹೇಳಿಕೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೊಲೆ ಬಗ್ಗೆ ತನಿಖೆ ನಡೆಸಲಾಗುವುದು ಎಂದಿದ್ದಾರೆ.

error: Content is protected !!