ದಾವಣಗೆರೆ, ನ.7- ಸಂಸದ ಜಿ.ಎಂ. ಸಿದ್ದೇಶ್ವರ ಅವರು ಕೇಂದ್ರ ಸರ್ಕಾರದಿಂದ ಬರ ಪರಿಹಾರದ ಹಣ ಕೊಡಿಸಲು ವಿಫಲರಾಗಿದ್ದಾರೆ ಎಂದು ಕೆಪಿಸಿಸಿ ಸದಸ್ಯ ಕಲ್ಲೇಶ್ ರಾಜ್ ಪಟೇಲ್ ಟೀಕಿಸಿದ್ದಾರೆ.
ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಶ್ವೇಶ್ವರ ಹಗಡೆ ಕಾಗೇರಿ ಹಾಗೂ ಸಂಸದ ಸಿದ್ದೇಶ್ವರ ನೇತೃತ್ವದಲ್ಲಿ ಬಿಜೆಪಿ ಮುಖಂಡರು ಜಿಲ್ಲೆಯಲ್ಲಿ ಬರ ವೀಕ್ಷಣೆ ಮಾಡಿರುವುದು ನಾಟಕೀಯ ಎಂದವರು ಆರೋಪಿಸಿದರು.
ಈಗಾಗಲೇ ಜಿಲ್ಲೆಯ ಎಲ್ಲಾ ತಾಲ್ಲೂಕುಗಳನ್ನು ಬರ ಪೀಡಿತ ಎಂದು ಘೋಷಣೆ ಮಾಡಿದ್ದು, ಕೇಂದ್ರ ತಂಡ ಬರ ಪರಿಶೀಲನೆ ನಡೆಸಿ, ಜಿಲ್ಲಾಡಳಿತದಿಂದ ಮಾಹಿತಿ ಸಂಗ್ರಹಿಸಿ ತೆರಳಿದೆ. ಕೇಂದ್ರ ತಂಡ ಬಂದಾಗ ಅವರ ಜೊತೆಗೆ ರೈತರ ಜಮೀನುಗಳಿಗೆ ತೆರಳಿ ನಿರ್ಲಕ್ಷ್ಯ ವಹಿಸಿದ ಬಿಜೆಪಿ ನಾಯಕರು ಈಗ ನಾಟಕವಾಡುತ್ತಿ ದ್ದಾರೆ ಎಂದು ಆರೋಪಿಸಿದರು.
ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯೂ ತಾವಾಗಿರುವುದಾಗಿ ಕಲ್ಲೇಶ್ ರಾಜ್ ಪಟೇಲ್ ಹೇಳಿದರು.