ಚಂದ್ರೇಗೌಡರ ನಿಧನಕ್ಕೆ ರಂಭಾಪುರಿ ಜಗದ್ಗುರುಗಳ ಸಂತಾಪ

ಚಂದ್ರೇಗೌಡರ ನಿಧನಕ್ಕೆ ರಂಭಾಪುರಿ ಜಗದ್ಗುರುಗಳ ಸಂತಾಪ

ಬಾಳೆಹೊನ್ನೂರು, ನ. 8 – ಸರಳ ಸಜ್ಜನಿಕೆಯ ವ್ಯಕ್ತಿತ್ವದ ಹಿರಿಯ ರಾಜಕಾರಣಿ ಡಿ.ಬಿ. ಚಂದ್ರೇಗೌಡರ ಅಗಲಿಕೆಗೆ ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ತಮ್ಮ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಚಂದ್ರೇಗೌಡರು ಸದಾ ಸಮಾಜದ ಹಿತ ಚಿಂತನೆ ಮಾಡುವವರಾಗಿದ್ದರು. ಶ್ರೀ ಜಗದ್ಗುರು ರಂಭಾಪುರಿ ಮಹಾಪೀಠದೊಂದಿಗೆ ಮೂವರು ಜಗದ್ಗುರುಗಳವರೊಡನೆ ನಿಕಟ ಸಂಪರ್ಕ ಹೊಂದಿದವರಾಗಿದ್ದರು ಎಂದು ಜಗದ್ಗುರುಗಳು ತಮ್ಮ ಸಂತಾಪ ಹೇಳಿಕೆಯಲ್ಲಿ ಸ್ಮರಿಸಿದ್ದಾರೆ.

error: Content is protected !!