ನಗರದಲ್ಲಿಂದು ಎಸ್.ಕೆ. ಪಾಂಡುರಾಜ್ ಅವರಿಗೆ ಅಭಿನಂದನಾ ಸಮಾರಂಭ

ನಗರದಲ್ಲಿಂದು ಎಸ್.ಕೆ. ಪಾಂಡುರಾಜ್ ಅವರಿಗೆ ಅಭಿನಂದನಾ ಸಮಾರಂಭ

ಧಾರವಾಡದಲ್ಲಿ ಕಳೆದ ವಾರ ನಡೆದ ಓಪನ್ ನ್ಯಾಷನಲ್ ಮಾಸ್ಟರ್‌ ಗೇಮ್ಸ್ 2023ರಲ್ಲಿ ವೇಯ್ಟ್ ಲಿಫ್ಟಿಂಗ್‌ನಲ್ಲಿ ಮಹಾನಗರ ಪಾಲಿಕೆಯ ವ್ಯವಸ್ಥಾಪಕ ಎಸ್.ಕೆ. ಪಾಂಡುರಾಜ್  ಅವರು  ಭಾಗವಹಿಸಿ ಪ್ರಥಮ ಸ್ಥಾನ ಗಳಿಸಿದ್ದು, ಅವರನ್ನು ಮಹಾನಗರ ಪಾಲಿಕೆ ನೌಕರರ ಸಂಘದಿಂದ ಇಂದು ಸಂಜೆ 5.30ಕ್ಕೆ ನಗರ ಪಾಲಿಕೆಯ ಸಭಾಂಗಣದಲ್ಲಿ ಅಭಿನಂದನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ.

ಮಹಾನಗರ ಪಾಲಿಕೆ ನೌಕರರ ಸಂಘದ ಅಧ್ಯಕ್ಷ ಕೆ. ಎಸ್. ಗೋವಿಂದ ರಾಜ್ ಅಧ್ಯಕ್ಷತೆ ವಹಿಸಲಿದ್ದು, ಮಹಾಪೌರರಾದ ವಿನಾಯಕ ಪೈಲ್ವಾನ್, ಉಪ ಮಹಾಪೌರರಾದ ಶ್ರೀಮತಿ ಯಶೋಧ, ಆಯುಕ್ತರಾದ ಶ್ರೀಮತಿ ರೇಣುಕಾ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಇ.ಎಂ. ಮಂಜುನಾಥ ಅವರುಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.

error: Content is protected !!