ನಗರದಲ್ಲಿ ಇಂದು ಕಾನೂನು ಅರಿವು ಕಾರ್ಯಕ್ರಮ

ಸ್ಲಂ ಜನಾಂದೋಲನ-ಕರ್ನಾಟಕ ಹಾಗೂ ಸಾವಿತ್ರಿಬಾಯಿ ಫುಲೆ ಮಹಿಳಾ ಸಂಘಟನೆ ಇವರ ಸಹಯೋಗದಲ್ಲಿ ಮಹಿಳೆಯರಿಗಾಗಿ ಇರುವ ಕಾನೂನುಗಳ ಬಗ್ಗೆ ಕಾನೂನು ಅರಿವು ಕಾರ್ಯಕ್ರಮವು ಇಂದು ಬೆಳಿಗ್ಗೆ 11 ಗಂಟೆಗೆ ರೋಟರಿ ಬಾಲಭವನದಲ್ಲಿ ನಡೆಯಲಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಮಾನವ ಹಕ್ಕುಗಳ ವೇದಿಕೆಯ ಕಾರ್ಯದರ್ಶಿ   ಎಲ್.ಹೆಚ್. ಅರುಣ್‍ಕುಮಾರ್ ನೆರವೇರಿಸಲಿದ್ದು, ಅಧ್ಯಕ್ಷತೆಯನ್ನು ಸ್ಲಂ ಜನಾಂದೋಲನ ಕರ್ನಾಟಕದ ಅಧ್ಯಕ್ಷ ಎಂ. ಶಬ್ಬೀರ್ ಸಾಬ್ ವಹಿಸುವರು.

ಮುಖ್ಯ ಅತಿಥಿಗಳಾಗಿ   ಸ್ಲಂ ಜನಾಂದೋಲನ  ಸಮಿತಿ  ಗೌರವಾಧ್ಯಕ್ಷ ಆನಂದಪ್ಪ ಎಸ್.ಎಲ್.,   ಹಿರಿಯ ವಕೀಲರಾದ ಬಿ.ಎಂ. ಹನುಮಂತಪ್ಪ,  ಶ್ರೀಮತಿ ಅನ್ನಪೂರ್ಣ ಟಿ.ಎಂ., ನಿವೇಶನ ರಹಿತರ ಹೋರಾಟ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ಮಂಜುಳ, ಮಂಡಕ್ಕಿ ಭಟ್ಟಿಯ ಮಾಜಿ ಅಧ್ಯಕ್ಷ ಮಹ್ಮದ್ ಹರ್ಷದ್ (ಮುನ್ನ) ಇವರುಗಳು ಆಗಮಿಸುವರು. ಸ್ಲಂ ಜನಾಂದೋಲನ ಕರ್ನಾಟಕದ  ರಾಜ್ಯ ಸಂಚಾಲಕ ಇಮ್ತಿಯಾಜ್ ಆರ್. ಮಾನ್ವಿ ಪ್ರಾಸ್ತಾವಿಕ ನುಡಿಗಳನ್ನಾಡುವರು.  

error: Content is protected !!