ಭದ್ರಾ ನಾಲೆಗಳಿಗೆ ಇಂದು ರಾತ್ರಿಯಿಂದ ನೀರು ನಿಲುಗಡೆ

ಶಿವಮೊಗ್ಗ, ನ.21 – 2023ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆಗಳಿಗೆ ಭದ್ರಾ ಬಲದಂಡೆ ಮತ್ತು ಎಡದಂಡೆ ನಾಲೆಗಳ ಮೂಲಕ ಹರಿಸ ಲಾಗುತ್ತಿದ್ದ ನೀರನ್ನು ಭದ್ರಾ ಕಾಡಾ ಅಧ್ಯಕ್ಷರ ಸೂಚನೆ ಮೇರೆಗೆ ನಾಳೆ ದಿನಾಂಕ 22ರ ಬುಧವಾರ ರಾತ್ರಿಯಿಂದ ನಿಲುಗಡೆ ಮಾಡಲಾಗುವುದು ಎಂದು ಭದ್ರಾ ಕಾಡಾ ಸಮಿತಿ ಕಾರ್ಯದರ್ಶಿ ಹಾಗೂ ಅಧೀಕ್ಷಕ ಇಂಜಿನಿಯರ್ ಸುಜಾತ ಮಂಗಳವಾರ ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ. ಆದರೆ, ಅಚ್ಚುಕಟ್ಟಿನ ಕೊನೆ ಭಾಗದ ರೈತರು ನ.25 ರವರೆಗೆ ನೀರು ಮುಂದುವರೆಸುವಂತೆ ಒತ್ತಾಯಿಸಿದ್ದಾರೆ.

error: Content is protected !!