ದಾವಣಗೆರೆ, ನ.22- ಹಳೆ ಕುಂದುವಾಡದ ಓಂ ಶ್ರೀ ಕರಿಬಸವೇಶ್ವರ ಸ್ವಾಮಿ ಪುಣ್ಯಕ್ಷೇತ್ರದಲ್ಲಿ ಇದೇ ದಿನಾಂಕ 27 ರ ಸೋಮವಾರ ಬೆಳಿಗ್ಗೆ 10 ಗಂಟೆಗೆ ಜಪ-ಹೋಮ-ಹವನ ನಡೆಯಲಿದೆ. ಮಧ್ಯಾಹ್ನ 1 ಗಂಟೆಗೆ ಪೂರ್ಣಾಹುತಿ ನಡೆಯುವುದು. ಅಂದು ಸಂಜೆ 7 ಗಂಟೆಗೆ ಲಕ್ಷ ದೀಪೋತ್ಸವ ಕಾರ್ಯಕ್ರಮ ನಡೆಯಲಿದೆ. ಸಾನ್ನಿಧ್ಯವನ್ನು ಧರ್ಮಾಧಿಕಾರಿ ಜೆ. ರಾಜಣ್ಣ ವಹಿಸುವರು. ಮುಖ್ಯ ಅತಿಥಿಗಳಾಗಿ ಶಾಸಕ ಶಾಮನೂರು ಶಿವಶಂಕರಪ್ಪ, ಸಚಿವ ಎಸ್.ಎಸ್. ಮಲ್ಲಿಕಾರ್ಜುನ್, ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ್, ಪೊಲೀಸ್ ರಕ್ಷಣಾಧಿಕಾರಿ ಶ್ರೀಮತಿ ಉಮಾ ಪ್ರಶಾಂತ್ ಮತ್ತಿತರರು ಭಾಗವಹಿಸಲಿದ್ದಾರೆ.
July 6, 2024