ನಿವೃತ್ತ ಪೊಲೀಸ್ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘಕ್ಕೆ ಭಂಡಾರೆ

ನಿವೃತ್ತ ಪೊಲೀಸ್ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘಕ್ಕೆ ಭಂಡಾರೆ

ದಾವಣಗೆರೆ, ನ. 27- ಕರ್ನಾಟಕ ರಾಜ್ಯ ನಿವೃತ್ತ ಪೊಲೀಸ್ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘ (ಬೆಂಗಳೂರು)ದ ಪದಾಧಿಕಾರಿಗಳ   ಚುನಾವಣೆ ಯಲ್ಲಿ ಚಂದ್ರಕಾಂತ್ ಎನ್. ಭಂಡಾರೆ ಅವರು ವಲಯ ಸಂಘಟನಾ ಕಾರ್ಯದರ್ಶಿಯಾಗಿ  ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಿವೃತ್ತ ಪೊಲೀಸ್ ವರಿಷ್ಠಾಧಿಕಾರಿಯಾಗಿರುವ ಭಂಡಾರೆ ಅವರು, ಅಖಿಲ ಕರ್ನಾಟಕ ಸ್ವಕುಳಸಾಳಿ ಸಮಾಜದ ರಾಜ್ಯಾಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

error: Content is protected !!