ದಾವಣಗೆರೆ, ನ. 28- ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ 24ನೇ ಮಹಾ ಅಧಿವೇಶನ ನಗರದಲ್ಲಿ ನಡೆಯಲಿದ್ದು, ಈ ಕಾರ್ಯಕ್ರಮದ ಸಿದ್ಧತೆಯ ಹಿನ್ನೆಲೆಯಲ್ಲಿ ಪೆಂಡಾಲ್ (ಹಂದರ) ಪೂಜೆಯನ್ನು ಎಂ.ಬಿ.ಎ. ಕಾಲೇಜು ಆವರಣದಲ್ಲಿ ನಾಡಿದ್ದು ದಿನಾಂಕ 30 ರ ಗುರುವಾರ ಮಧ್ಯಾಹ್ನ 1.35 ಕ್ಕೆ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ನೆರವೇರಿಸಲಿದ್ದಾರೆ.
ಮಹಾಸಭಾದ ಪದಾಧಿಕಾರಿಗಳು, ಸದಸ್ಯರು ಹಾಗೂ ಎಲ್ಲಾ ಸಮಿತಿಯ ಸದಸ್ಯರು ಮತ್ತು ಸಮಾಜ ಬಾಂಧವರು ಹಾಜರಾಗಲು ಸಭಾದ ಜಿಲ್ಲಾಧ್ಯಕ್ಷ ದೇವರಮನೆ ಶಿವಕುಮಾರ್ ತಿಳಿಸಿದ್ದಾರೆ.