ಹೊನ್ನಾಳಿಗೆ ಇಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ವಿಪಕ್ಷ ನಾಯಕ ಅಶೋಕ್

ಹೊನ್ನಾಳಿಗೆ ಇಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ವಿಪಕ್ಷ ನಾಯಕ ಅಶೋಕ್

ನ್ಯಾಮತಿ, ನ. 29 – ನಾಳೆ ದಿನಾಂಕ 30 ರ ಗುರುವಾರ ಬೆಳಗ್ಗೆ 9 ಘಂಟೆಗೆ ನೂತನ ಬಿಜೆಪಿ  ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ನೂತನ ಪ್ರತಿಪಕ್ಷ ನಾಯಕ ಆರ್.ಅಶೋಕ್ ಅವರು ಸವಳಂಗ ಸರ್ಕಲ್ ಗೆ ಆಗಮಿಸಲಿದ್ದಾರೆಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ತಿಳಿಸಿದ್ದಾರೆ.

ಸವಳಂಗ ಗ್ರಾಮದ ಮಿಕ್ಕಿಮಾರಮ್ಮ ದೇವಸ್ಥಾನದಲ್ಲಿ ಮುಖಂಡರು, ಕಾರ್ಯಕರ್ತರ ಸಭೆ ನಡೆಸಿ ಮಾತನಾಡಿದ ರೇಣುಕಾಚಾರ್ಯ ಅವರು, ವಿಜಯೇಂದ್ರ ಮತ್ತು ಅಶೋಕ್ ಅವರುಗಳನ್ನು ಸವಳಂಗ ಸರ್ಕಲ್ ನಲ್ಲಿ ಬಿಜೆಪಿ ಹೊನ್ನಾಳಿ ಮಂಡಲದ ವತಿಯಿಂದ ಅದ್ದೂರಿಯಾಗಿ ಬರಮಾಡಿ ಕೊಳ್ಳಲಾಗುವುದು ಎಂದರು.

ಈ ಸಂದರ್ಭದಲ್ಲಿ ಬಿಜೆಪಿ ತಾಲ್ಲೂಕು ಅಧ್ಯಕ್ಷ ಜೆ.ಕೆ.ಸುರೇಶ್, ಜಿ.ಪಂ.ಮಾಜಿ ಉಪಾಧ್ಯಕ್ಷ ಸುರೇಂದ್ರನಾಯ್ಕ, ಜಿಲ್ಲಾ ಪ್ರಧಾನಕಾರ್ಯದರ್ಶಿ ಅರಕೆರೆ ನಾಗರಾಜ್, ಮಾಜಿ ನಿರ್ದೇಶಕರುಗಳಾದ ಶಿವು ಹುಡೇದ್, ಮಾರುತಿ ನಾಯ್ಕ, ಗ್ರಾ.ಪಂ.ಮಾಜಿ ಅಧ್ಯಕ್ಷರಾದ ಗಿರೀಶ್ ಪಟೇಲ್, ಗ್ರಾ.ಪಂ.ಸದಸ್ಯರಾದ ಕೊಡತಾಳ್ ನಾಗರಾಜ್, ಗ್ರಾ.ಪಂ.ಅಧ್ಯಕ್ಷರಾದ ಗೋವಿಂದ್, ಸುರಹೊನ್ನೆ ಸದಣ್ಣ, ತಾ.ಪಂ. ಮಾಜಿ ಸದಸ್ಯ ಹನುಮಂತಪ್ಪ, ಸೋಗಿಲು ಮಂಜುನಾಥ್, ಸಂತೋಷ್, ಕಾಮೇಶ್ ನಾಯ್ಕ, ಬಿದರಹಳ್ಳಿ ಯೋಗೇಶ್, ಮಾದಾಪುರ ಮಂಜು ಪಾಟೀಲ್ ಸೇರಿದಂತೆ ಮತ್ತಿತರರಿದ್ದರು. 

error: Content is protected !!