ನಗರದಲ್ಲಿ ಇಂದು ವಕೀಲರ ದಿನಾಚರಣೆ

ಜಿಲ್ಲಾ ವಕೀಲರ ಸಂಘದಿಂದ  ಇಂದು ಬೆಳಿಗ್ಗೆ 10.30ಕ್ಕೆ ವಕೀಲರ ಸಾಂಸ್ಕೃತಿಕ ಸಮುದಾಯ ಭವನದಲ್ಲಿ ವಕೀಲರ ದಿನಾಚರಣೆ ಕಾರ್ಯಕ್ರಮ ನಡೆಯಲಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶ್ರೀಮತಿ ರಾಜೇಶ್ವರಿ ಎನ್. ಹೆಗಡೆ ನೆರವೇರಿಸಲಿದ್ದು, ಅಧ್ಯಕ್ಷತೆಯನ್ನು ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಲ್.ಹೆಚ್. ಅರುಣ್‍ಕುಮಾರ್ ಆಗಮಿ ಸುವರು. ಮುಖ್ಯ ಅತಿಥಿಗಳಾಗಿ ಮಕ್ಕಳ ಸ್ನೇಹಿ ನ್ಯಾಯಾ ಲಯದ ಜಿಲ್ಲಾ ನ್ಯಾಯಾಧೀಶರಾದ ಶ್ರೀಪಾದ ಎನ್., ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಪ್ರವೀಣ್ ಕುಮಾರ್ ಆರ್.ಎನ್. ಹಿರಿಯ ವಕೀಲರುಗಳಾದ ಹೆಚ್.ಎನ್. ರಾಜಶೇಖರಪ್ಪ, ಎಂ.ಬಿ. ಶಿವಾನಂದಪ್ಪ, ರಾಮಚಂದ್ರ ಕಲಾಲ್ ಆಗಮಿಸುವರು.

error: Content is protected !!