ಹರಪನಹಳ್ಳಿ, ಡಿ.6- ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್.ಡಿ.ಎ ಸರ್ಕಾರ ಬಹುಮತದೊಂದಿಗೆ ಕೇಂದ್ರದಲ್ಲಿ ಸರ್ಕಾರ ರಚಿಸಲಿದೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮಾಜಿ ನಿರ್ದೇಶಕ ಆರುಂಡಿ ನಾಗರಾಜ್ ವಿಶ್ವಾಸ ವ್ಯಕ್ತಪಡಿಸಿದರು. ಈ ಕುರಿತು ಪತ್ರಿಕಾ ಹೇಳಿಕೆ ನೀಡಿ, ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಈಗಾಗಲೇ ರಾಷ್ಟ್ರದ ಜನತೆಗೆ ಕೊಡಮಾಡಿದ ಅನೇಕ ಜನಪರ ಯೋಜನೆಗಳಿಗೆ, ರಾಷ್ಟ್ರದ ಅಭಿವೃದ್ಧಿಗಾಗಿ ತೆಗೆದುಕೊಂಡ ದಿಟ್ಟ ಕ್ರಮಗಳೊಂದಿಗೆ ತನ್ನದೇ ಆದ ಛಾಪು ಮೂಡಿಸಿದೆ ಎಂದಿದ್ದಾರೆ.
July 24, 2024