ಇಂದಿನ ಪಾಲಿಕೆ ರಾಜ್ಯೋತ್ಸವಕ್ಕೆ ಸಚಿವ ಎಸ್ಸೆಸ್ಸೆಂ, ಸಂಸದ ಸಿದ್ದೇಶ್ವರ

ಮಹಾನಗರ ಪಾಲಿಕೆ ವತಿಯಿಂದ ನಿನ್ನೆ ಆರಂಭಗೊಂಡಿರುವ ಮೂರು ದಿನಗಳ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದ 2ನೇ ದಿನವಾದ ಇಂದು ಸಂಜೆ 5.30ಕ್ಕೆ ಪಾಲಿಕೆ ಆವರಣದ ಶ್ರೀಮತಿ ರಾಧಮ್ಮ ಚನ್ನಗಿರಿ ರಂಗಪ್ಪ ಸ್ಮಾರಕ ರಂಗಮಂದಿರದಲ್ಲಿ ಏರ್ಪಾಡಾಗಿರುವ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶಾಮನೂರು ಮಲ್ಲಿಕಾರ್ಜುನ್, ಲೋಕಸಭಾ ಸದಸ್ಯ ಜಿ.ಎಂ. ಸಿದ್ದೇಶ್ವರ, ವಿಧಾನ ಪರಿಷತ್ ಸದಸ್ಯ ಕೆ. ಅಬ್ದುಲ್ ಜಬ್ಬಾರ್ ಸಾಬ್ ಅವರುಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.

ಹೊನ್ನಾಳಿಯ ಕನ್ನಡ ಅಧ್ಯಾಪಕ ವಿಜಯ ಸೊಲ್ಲಾಪುರ ಅವರು ವಿಶೇಷ ಉಪನ್ಯಾಸ ನೀಡುವರು. ಮಹಾಪೌರರಾದ ವಿನಾಯಕ ಪೈಲ್ವಾನ್ ಅಧ್ಯಕ್ಷತೆ ವಹಿಸುವರು. ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್, ಜಿ.ಪಂ. ಸಿಇಒ ಸುರೇಶ್ ಹಿಟ್ನಾಳ್, ವಿಶಿಷ್ಟ ಕನ್ನಡ ಶಾಯಿರಿಗಳ ಹೆಸರಾಂತ ಕವಿ ಶಿವಮೊಗ್ಗದ ಅಸಾದುಲ್ಲಾ ಬೇಗ್, ಉಪ ಮಹಾಪೌರರಾದ ಶ್ರೀಮತಿ ಯಶೋಧ ಹೆಗ್ಗಪ್ಪ, ಪಾಲಿಕೆ ಆಯುಕ್ತರಾದ ಶ್ರೀಮತಿ ರೇಣುಕಾ, ಕನ್ನಡ ಸಮರ ಸೇನೆ ಮಹಿಳಾ ಘಟಕದ ಅಧ್ಯಕ್ಷರಾದ ಶ್ರೀಮತಿ ದ್ರಾಕ್ಷಾಯಣಮ್ಮ ಮಲ್ಲಿಕಾರ್ಜುನಯ್ಯ ಮುಖ್ಯ ಅತಿಥಿಗಳಾಗಿದ್ದಾರೆ.

error: Content is protected !!