ಹರಿಹರದಲ್ಲಿ ಇಂದು ಕೇಂದ್ರ ಸರ್ಕಾರದ ಯೋಜನೆಗಳ ನೋಂದಣಿ ಕಾರ್ಯಕ್ರಮ

ಆಟೋ ಮಾಲೀಕರ ಮತ್ತು ಚಾಲಕರ ಸಂಘದ ವತಿಯಿಂದ ಇಂದು ಬೆಳಿಗ್ಗೆ  ಗುರುಭವನದಲ್ಲಿ ಅಸಂಘಟಿತ ಕಾರ್ಮಿಕರಾದ ಆಟೋ ಚಾಲಕರಿಗೆ ಕೇಂದ್ರ ಸರ್ಕಾರದ ಯೋಜನೆಗಳ ನೋಂದಣಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕೇಂದ್ರ ಸರ್ಕಾರ, ಕಾರ್ಮಿಕ  ಮತ್ತು ಉದ್ಯೋಗ ಇಲಾಖೆಯ ಸಾಮಾಜಿಕ ಭದ್ರತೆ ಯೋಜನೆಗಳಾದ ಈ-ಶ್ರಮ್ ಕಾರ್ಡ್, ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್ ಧನ್ ಯೋಜನೆ ನೋಂದಣಿ ಮತ್ತು ಪ್ರಧನಾ ಮಂತ್ರಿ ಸ್ವನಿಧಿ ಸಮೃದ್ಧಿ ಯೋಜನೆಗಳ ಅರಿವು ಮತ್ತು ನೋಂದಣಿ ಕಾರ್ಯಕ್ರಮ ನಡೆಯಲಿದೆ. ಸಂಸದ ಜಿ.ಎಂ. ಸಿದ್ಧೇಶ್ವರ, ಶಾಸಕ ಬಿ.ಪಿ. ಹರೀಶ್ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. 

error: Content is protected !!