ಲೇಬರ್ ಕಾಲೋನಿಯಲ್ಲಿ ಇಂದು ಶ್ರೀ ಶಬರಿಮಲೈ ಅಯ್ಯಪ್ಪ ಸ್ವಾಮಿ ದೀಪೋತ್ಸವ

ದಾವಣಗೆರೆ ಲೇಬರ್ ಕಾಲೋನಿಯಲ್ಲಿರುವ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಸ್ವಾಮಿ ಅಯ್ಯಪ್ಪ ಶಬರಿಮಲೈ ಸೇವಾ ಸಮಿತಿ ವತಿಯಿಂದ ನಾಳೆ ದಿನಾಂಕ 9 ರಿಂದ 11 ರವರೆಗೆ ಶ್ರೀ ಶಬರಿಮಲೈ ಅಯ್ಯಪ್ಪ ಸ್ವಾಮಿಯ ಮಹಾ ದೀಪೋತ್ಸವ ಮತ್ತು ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಇಂದು ಬೆಳಗ್ಗೆ 6 ಗಂಟೆಗೆ ಅಷ್ಟೋತ್ತರ ಮಹಾಪೂಜೆ ನೆರವೇರಲಿದೆ. ಮಧ್ಯಾಹ್ನ 1 ಕ್ಕೆ ಅನ್ನ ಸಂತರ್ಪಣೆ ಕಾರ್ಯಕ್ರಮವಿದ್ದು, ಸಚಿವ ಶಾಮನೂರು ಮಲ್ಲಿಕಾರ್ಜುನ್ ಚಾಲನೆ ನೀಡುವರು. ಪಾಲಿಕೆ ಸದಸ್ಯ ಜೆ.ಎನ್. ಶ್ರೀನಿವಾಸ್ ಭಾಗವಹಿಸುವರು.

ನಾಳೆ ಭಾನುವಾರ ಬೆಳಿಗ್ಗೆ 5 ಗಂಟೆಯಿಂದ 6.30 ರವರೆಗೆ ಗಣಪತಿ ಹೋಮ ಮತ್ತು ಪೂರ್ಣಾಹುತಿ ನಡೆಯಲಿದೆ. ಬೆಳಗ್ಗೆ 7 ರಿಂದ 7.30 ರವರೆಗೆ ಸ್ವಾಮಿಯನ್ನು ಬಾಳೆ ಮಂಟಪದಲ್ಲಿ ಪ್ರತಿಷ್ಠಾಪನೆ ಮಾಡಲಾಗುವುದು. ಮಧ್ಯಾಹ್ನ 3 ಗಂಟೆಗೆ ದೀಪೋತ್ಸವವಿದ್ದು, ಸಂಸದ ಜಿ.ಎಂ.ಸಿದ್ದೇಶ್ವರ ಹಾಗೂ ಮಾಜಿ ಶಾಸಕ ಎಸ್. ವಿ. ರಾಮಚಂದ್ರ ದೀಪೋತ್ಸವವನ್ನು ಉದ್ಘಾಟಿಸುವರು. ಮಧ್ಯಾಹ್ನ 3 ಗಂಟೆಗೆ ಸುಮಂಗಲಿಯರ ದೀಪೋತ್ಸವದೊಂದಿಗೆ ಸ್ವಾಮಿಯ ಮೆರವಣಿಗೆ ಜರುಗಲಿದೆ.

ದಿನಾಂಕ 11ರ ಸೋಮವಾರ ಬೆಳಿಗ್ಗೆ 5 ರಿಂದ 6.30 ರವರೆಗೆ ಅಗ್ನಿಕುಂಡದ ಹರಕೆ ಅರ್ಪಿಸಲಾಗುವುದು. ನಂತರ 6.30ಕ್ಕೆ ಮಹಾ ಮಂಗಳಾರತಿ ಮತ್ತು ಬಾಳೆಮಂಟಪ ವಿಸರ್ಜನೆ ನೆರವೇರಲಿದೆ.

error: Content is protected !!