ದಾವಣಗೆರೆ ಜಿಲ್ಲಾ ಶಾಲಾ ಆಟೋ ಮತ್ತು ವ್ಯಾನ್ ಚಾಲಕರ ಸಂಘದ ವತಿಯಿಂದ 500 ಆಟೋ, 300 ವ್ಯಾನ್ಗಳ ರಾಲಿ ಹೈಸ್ಕೂಲ್ ಮೈದಾನದಿಂದ ಇಂದು ಪ್ರಾರಂಭಗೊಳ್ಳಲಿದೆ. ಬೆಳಗ್ಗೆ 10 ಗಂಟೆಗೆ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ಈ ರ್ಯಾಲಿ ಗೆ ಚಾಲನೆ ನೀಡುವರು. ಸಂಜೆ 6 ಗಂಟೆಗೆ ಹೈಸ್ಕೂಲ್ ಮೈದಾನದಲ್ಲಿ ಕರ್ನಾಟಕ ರಾಜ್ಯೋತ್ಸವ ಮತ್ತು ರಸಮಂಜರಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಜೀ ಕನ್ನಡ ಕಾಮಿಡಿ ಕಿಲಾಡಿಗಳಿಂದ ಹಾಸ್ಯ ಕಾರ್ಯಕ್ರಮವಿದೆ ಎಂದು ಜಿಲ್ಲಾಧ್ಯಕ್ಷ ವಿ. ಮಂಜುನಾಥ್ ತಿಳಿಸಿದ್ದಾರೆ. ಸಂಜೆ ಕಾರ್ಯಕ್ರಮಕ್ಕೆ ಸಂಸದ ಜಿ.ಎಂ.ಸಿದ್ದೇಶ್ವರ, ಬಿಜೆಪಿ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಲೋಕಿಕೆರೆ ನಾಗರಾಜ, ಮಾಜಿ ಮೇಯರ್ ಬಿ.ಜೆ. ಅಜಯ್ ಕುಮಾರ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಶ್ರೀನಿವಾಸ ದಾಸಕರಿಯಪ್ಪ ಸೇರಿದಂತೆ ಅತಿಥಿ ಗಣ್ಯರು ಭಾಗವಹಿಸುವರು.
July 23, 2024