ಸನ್ಮಾನಕ್ಕೆ ಮಾಜಿ ಸೈನಿಕರಿಂದ ಅರ್ಜಿ

ದಾವಣಗೆರೆ, ಡಿ.10- ಶಿವಮೊಗ್ಗದ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ವತಿಯಿಂದ ಇದೇ ದಿನಾಂಕ 16 ರಂದು ನಡೆಯಲಿರುವ `ವಿಜಯ ದಿವಸ’ದ ಅಂಗವಾಗಿ 1971ರ ಯುದ್ದದಲ್ಲಿ ಸಕ್ರಿಯ ವಾಗಿ ಭಾಗವಹಿಸಿದ ಮಾಜಿ ಸೈನಿಕರಿಂದ ಸನ್ಮಾನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಯುದ್ದದಲ್ಲಿ ಸಕ್ರಿಯವಾಗಿ ಭಾಗವಹಿಸಿದ ಮಾಜಿ ಸೈನಿಕರು ತಮ್ಮ ಮಾಜಿ ಸೈನಿಕ ಗುರುತಿನ ಚೀಟಿ ಮತ್ತು ಪೂರ್ವ ಅಥವಾ ಪಶ್ಚಿಮ ಮೆಡಲ್‍ಗಳನ್ನು ಹೊಂದಿರುವ ಸ್ವವಿವರಗಳನ್ನೊಳಗೊಂಡ ಮಾಹಿತಿಯನ್ನು [email protected] ಅಥವಾ ದೂ.08182-220925ಗೆ ಕರೆ ಮಾಡಿ ನೋಂದಾಯಿಸಿಕೊಳ್ಳಬಹುದು.

ಹೆಚ್ಚಿನ ಮಾಹಿತಿಗಾಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಶಿವಮೊಗ್ಗ ದೂ.08182-220925ಗೆ ಸಂಪರ್ಕಿಸಲು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಪ್ರಭಾರ ಉಪ ನಿರ್ದೇಶಕ ಡಾ. ಸಿ.ಎ ಹಿರೇಮಠ್ ತಿಳಿಸಿದ್ದಾರೆ.

error: Content is protected !!