ನೈತಿಕ ಪೊಲೀಸ್‍ಗಿರಿ : ಶಿಕ್ಷೆ ನೀಡಲು ಕಾಂಗ್ರೆಸ್ ಮನವಿ

ದಾವಣಗೆರೆ, ಡಿ.13- ಕಾನೂನು ಸುವ್ಯವಸ್ಥೆಗೆಂದು ಸಂವಿಧಾನದಲ್ಲಿ ಕೆಲವು ಕಾನೂನು ರೂಪಿಸಿದ್ದು, ಪ್ರತಿಯೊಬ್ಬರು ಸಂವಿಧಾನಕ್ಕೆ ಗೌರವ ನೀಡಿ ನಡೆದುಕೊಳ್ಳಬೇಕು. ಕಾನೂನು ಕೈಗೆತ್ತಿಕೊಂಡವರು ಯಾರೇ ಆಗಲೀ ತಕ್ಕ ಶಿಕ್ಷೆ ನೀಡಬೇಕೆಂದು ಜಿಲ್ಲಾ ಕಾಂಗ್ರೆಸ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಮಾಡಿದೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಬಿ.ಮಂಜಪ್ಪ, ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಅಯೂಬ್ ಪೈಲ್ವಾನ್, ಕೆ.ಜಿ.ಶಿವಕುಮಾರ್ ಅವರು ಕಾನೂನು ಕಾಪಾಡುವ ಹೆಸರಿನಲ್ಲಿ ನೈತಿಕ ಪೊಲೀಸ್‌ಗಿರಿ ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ. ಕಳೆದ 3-4 ದಿನಗಳ ಹಿಂದೆ ಯುವಕನೊಬ್ಬನಿಗೆ ಕೆಲವು ಕಿಡಿ ಗೇಡಿಗಳು ನೈತಿಕ ಪೊಲೀಸ್‍ಗಿರಿ ಹೆಸರಿನಲ್ಲಿ ಥಳಿಸಿದ್ದು, ಇಂತಹ ಘಟನೆಗಳು ನಗರದಲ್ಲಿ ಆಗಬಾರದಿತ್ತು ಎಂದಿರುವ ಅವರು ಗಳು, ನೈತಿಕ ಪೊಲೀಸ್‌ ಗಿರಿ ನಡೆಸಿರುವವರ ವಿರುದ್ಧ ಕ್ರಮ ಕೈಗೊಳ್ಳುವ ಮೂಲಕ ಪೊಲೀಸ್ ಇಲಾಖೆ ಮುಂದೆ ಇಂತಹ ದುಷ್ಕೃತ್ಯಗಳು ನಡೆಯದಂತೆ ತಡೆಯಬೇಕೆಂದು ಒತ್ತಾಯಿಸಿದ್ದಾರೆ.

error: Content is protected !!