ಸಾಸ್ವೇಹಳ್ಳಿಯಲ್ಲಿ ಇಂದು ಜನತಾದರ್ಶನ

ಮುಖ್ಯಮಂತ್ರಿಗಳ ಮಹತ್ವಾಕಾಂಕ್ಷೆಯ ಜನತಾ ದರ್ಶನ ಕಾರ್ಯಕ್ರಮ ಇಲ್ಲಿನ ನೀರಾವರಿ ಇಲಾಖೆಯ ಆವರಣದಲ್ಲಿ ಇಂದು ನಡೆಯಲಿದೆ ಎಂದು ತಹಶೀಲ್ದಾರ್ ಪಟ್ಟರಾಜೇಗೌಡ ತಿಳಿಸಿದ್ದಾರೆ. ಬೆಳಿಗ್ಗೆ 10-30ಕ್ಕೆ ಶಾಸಕ ಡಿ.ಜೆ.ಶಾಂತನಗೌಡ ಕಾರ್ಯ ಕ್ರಮದ ವೇದಿಕೆ ಉದ್ಘಾಟನೆ ಮಾಡಲಿದ್ದು,  ಜಿಲ್ಲಾಧಿ ಕಾರಿ ಡಾ. ಎಂ.ವಿ.ವೆಂಕಟೇಶ್ ಸೇರಿದಂತೆ ಜಿಲ್ಲಾ ಹಂತದ ಎಲ್ಲಾ ಇಲಾಖೆಯ ಅಧಿಕಾರಿಗಳು ಹಾಗೂ ಹೊನ್ನಾಳಿ ತಾಲ್ಲೂಕು ಮಟ್ಟದ ಎಲ್ಲಾ ಇಲಾಖೆ ಅಧಿ ಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ.

error: Content is protected !!