ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ನ ಜಿಲ್ಲಾ ಸಮಿತಿ, ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ ಇವರ ಸಂಯುಕ್ತಾಶ್ರಯದಲ್ಲಿ ಇಂದು ಬೆಳಿಗ್ಗೆ 11 ಗಂಟೆಗೆ ಆನಗೋಡು ಬಳಿಯ ಉಳುಪಿನ ಕಟ್ಟೆಯ ಉಪಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ 31 ನೇ ಜಿಲ್ಲಾ ಮಟ್ಟದ ರಾಷ್ಟ್ರೀಯ ವಿಜ್ಞಾನ ಸಮಾವೇಶ ನಡೆಯಲಿದೆ.
ಜಿಲ್ಲಾಧಿಕಾರಿ ಡಾ.ವೆಂಕಟೇಶ್ ಎಂ.ವಿ ಕಾರ್ಯಕ್ರಮ ಉದ್ಘಾಟಿಸು ವರು. ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ನ ಗೌರವಾಧ್ಯಕ್ಷ ಡಾ.ಜೆ.ಟಿ.ರಾಜ್ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಬಿಐಇಟಿ ನಿರ್ದೇಶಕ ಪ್ರೊ.ವೈ.ವೃಷಭೇಂದ್ರಪ್ಪ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ಜಿ.ಕೊಟ್ರೇಶ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವಿಜ್ಞಾನ ವಿಷಯ ಪರಿವೀಕ್ಷಕರಾದ ಆರ್.ಟಿ.ವಸಂತಕುಮಾರಿ, ಬಾಪೂಜಿ ಚೈಲ್ಡ್ ಹೆಲ್ತ್ ಇನ್ಸ್ಟಿಟ್ಯೂಟ್ ಮತ್ತು ರಿಸರ್ಚ್ ಸೆಂಟರ್ನ ಮಕ್ಕಳ ಮತ್ತು ನವಜಾತ ಶಿಶುಗಳ ತಜ್ಞೆ ಡಾ.ಮಾನಸ.ಕೆ.ಬಿ ಶಿವಮೊಗ್ಗದ ಆಡ್ ಶಾಪ್ ಇ-ರಿಟೇಲ್ ರಾಘವೇಂದ್ರ.ಹೆಚ್ ಭಾಗವಹಿಸುವರು.