ನಗರದಲ್ಲಿ ಇಂದು ವಿಜ್ಞಾನ ವಿಚಾರ ಸಂಕಿರಣ, ರಸಪ್ರಶ್ನೆ ಸ್ಪರ್ಧೆ

ಶ್ರೀಮತಿ ಪಾರ್ವತಮ್ಮ ಶಾಮನೂರು ಶಿವಶಂಕರಪ್ಪ ವಿಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿ ಇಂದು ಬೆಳಿಗ್ಗೆ 10 ಗಂಟೆಗೆ ದಿ. ಪಾರ್ವತಮ್ಮ ಶಾಮನೂರು ಶಿವಶಂಕರಪ್ಪ ಇವರ ಸ್ಮರಣಾರ್ಥ 15ನೇ ವಿಜ್ಞಾನ ವಿಚಾರ ಸಂಕಿರಣ ಹಾಗೂ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಗಣಿತ ಮತ್ತು ವಿಜ್ಞಾನ ರಸ ಪ್ರಶ್ನೆ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ.

ಕಾಲೇಜಿನ ಪ್ರಾಚಾರ್ಯ ಪ್ರೊ. ಎಂ.ಪಿ. ರುದ್ರಪ್ಪ ಅಧ್ಯಕ್ಷತೆಯಲ್ಲಿ ಜರುಗುವ ಕಾರ್ಯಕ್ರಮವನ್ನು ಬಾಪೂಜಿ ವಿದ್ಯಾಸಂಸ್ಥೆಯ ಆಡಳಿತ ಮತ್ತು ಶೈಕ್ಷಣಿಕ ನಿರ್ದೇಶಕ ಡಾ. ಎಂ.ಜಿ. ಈಶ್ವರಪ್ಪ ಉದ್ಘಾಟಿಸಲಿದ್ದಾರೆ. 

ಮುಖ್ಯ ಅತಿಥಿಗಳಾಗಿ ಇಸ್ರೋ ವಿಜ್ಞಾನಿ ಶಿವಕುಮಾರ್ ಎಸ್.ಪಾಟೀಲ್, ಬಾಪೂಜಿ ವಿದ್ಯಾಸಂಸ್ಥೆಯ ಖಜಾಂಚಿ ಎ.ಎಸ್. ನಿರಂಜನ, ಶಿಕ್ಷಕ ಎಂ.ಎನ್. ಶ್ರೀಧರ ಮಯ್ಯ ಪಾಲ್ಗೊಳ್ಳಲಿದ್ದು, ನಂತರ ಬೆಳಿಗ್ಗೆ 11 ರಿಂದ ವಿಚಾರ ಸಂಕಿರಣಗಳು ನಡೆಯಲಿವೆ.

error: Content is protected !!