ವೀರಶೈವ ಲಿಂಗಾಯತ ಮಹಾಸಭಾ ಅಧಿವೇಶನದ ಸಮಾರೋಪ ಇಂದು

ಕಾರ್ಯಕ್ರಮದಲ್ಲಿ  ಕಾಶಿ ಪೀಠದ ಜಗದ್ಗುರುಗಳು, ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಬಸವರಾಜ ಬೊಮ್ಮಾಯಿ ಸೇರಿದಂತೆ ಅನೇಕ ಗಣ್ಯರು ಭಾಗಿ

ಬಾಪೂಜಿ ಎಂಬಿಎ ಕಾಲೇಜು ಮೈದಾನದಲ್ಲಿ ನಡೆಯುತ್ತಿರುವ ಅಖಿಲ ಭಾರತ ವೀರಶೈವ -ಲಿಂಗಾಯತ ಮಹಾಸಭಾದ 24 ನೇ ಮಹಾ ಅಧಿವೇಶನದ ಸಮಾರೋಪ  ಸಮಾರಂಭವು ಇಂದು ಮಧ್ಯಾಹ್ನ 3.30 ಕ್ಕೆ ಜರುಗಲಿದೆ.    

ಬೆಳಿಗ್ಗೆ 9.30ಕ್ಕೆ ಧಾರ್ಮಿಕ ಅಧಿವೇಶನ ಜರುಗಲಿದ್ದು, ಕಾಶಿ ಜಗದ್ಗುರು ಡಾ. ಚಂದ್ರಶೇಖರ ಶಿವಾಚಾರ್ಯ ಭಗವತ್ಪಾದರು, ಕೊಟ್ಟೂರು ಸಂಸ್ಥಾನ ಮಠದ ಶ್ರೀ ಕೊಟ್ಟೂರು ಬಸವಲಿಂಗ ಸ್ವಾಮೀಜಿ, ಡಾ. ಅನ್ನದಾನೀಶ್ವರ ಮಹಾಶಿವಯೋಗಿಗಳು,  ನಂದಿಗುಡಿ ಬೃಹನ್ಮಠದ ಶ್ರೀ ಸಿದ್ಧರಾಮೇಶ್ವರ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ.

ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಾರ್ಯಕ್ರಮ ಉದ್ಘಾಟಿಸುವರು. ಆನಂದಪುರ ಶ್ರೀ ಮುರುಘರಾಜೇಂದ್ರ ಮಹಾಸಂಸ್ಥಾನ ಮಠದ ಶ್ರೀ ಮಲ್ಲಿಕಾರ್ಜುನ ಮುರುಘಾರಾಜೇಂಸದ್ರ ಸ್ವಾಮೀಜಿ ಅಧ್ಯಕ್ಷತೆ ವಹಿಸಲಿದ್ದು, ಶ್ರೀ ಜಗದ್ಗುರು ಪಕೀರ ದಿಂಗಾಲೇಶ್ವರ ಸ್ವಾಮೀಜಿ ದಿಕ್ಸೂಚಿ ಭಾಷಣ ಮಾಡಲಿದ್ದಾರೆ.

ಬೆಳಿಗ್ಗೆ 9.30 ರಿಂದ 12.30 ರವರೆಗೆ ಮಹಿಳಾ ಮತ್ತು ಯುವ ಅಧಿವೇಶನ ನಡೆಯಲಿದ್ದು, ಸಚಿವೆ  ಲಕ್ಷ್ಮೀ ಹೆಬ್ಬಾಳಕರ್ ಕಾರ್ಯಕ್ರಮ ಉದ್ಘಾಟಿಸುವರು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅಧ್ಯಕ್ಷತೆ ವಹಿಸಲಿದ್ದು, ಬೆಳಗಾವಿ ಸಂಸದೆ ಮಂಗಳ ಸುರೇಶ್ ಅಂಗಡಿ ದಿಕ್ಸೂಚಿ ಭಾಷಣ ಮಾಡಲಿದ್ದಾರೆ.

ಮಧ್ಯಾಹ್ನ 12.15 ರಿಂದ ಮಧ್ಯಾಹ್ನ 2 ರವರೆಗೆ ನೌಕರರ ಅಧಿವೇಶನ ನಡೆಯಲಿದ್ದು, ಸಚಿವ ಶಿವಾನಂದ ಎಸ್. ಪಾಟೀಲ್ ಕಾರ್ಯಕ್ರಮ ಉದ್ಘಾಟಿಸುವರು. ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾದ ಉಪಾಧ್ಯಕ್ಷ ಶಂಕರ ಮಹಾದೇವ ಬಿದರಿ ಅಧ್ಯಕ್ಷತೆ ವಹಿಸಲಿದ್ದಾರೆ. ಬೆಸ್ಕಾಂ ಎಂಡಿ ಮಹಾಂತೇಶ್ ಬೀಳಗಿ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. 

ಮಧ್ಯಾಹ್ನ 12.15 ರಿಂದ 2 ರವರೆಗೆ ಸಾಹಿತಿಗಳ ಅಧಿವೇಶನ ನಡೆಯಲಿದೆ. ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕಾರ್ಯಕ್ರಮ ಉದ್ಘಾಟಿಸುವರು. ಮಹಾಸಭಾ ಉಪಾಧ್ಯಕ್ಷ ವಿನಯ್ ಕುಲಕರ್ಣಿ ಅಧ್ಯಕ್ಷತೆ ವಹಿಸಲಿದ್ದು, ಸಂಸದ ಬಿ.ವೈ. ರಾಘವೇಂದ್ರ ದಿಕ್ಸೂಚಿ ಭಾಷಣ ಮಾಡಲಿದ್ದಾರೆ.

ಮಧ್ಯಾಹ್ನ 3.30 ಕ್ಕೆ ಸಮಾರೋಪ ಸಮಾರಂಭದಲ್ಲಿ ಉಜ್ಜಯಿನಿ ಜಗದ್ಗುರು ಶ್ರೀ ಸಿದ್ಧಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರು, ಸಾಣೇಹಳ್ಳಿ ಡಾ. ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ಶಿರಹಟ್ಟಿ ಶ್ರೀ ಫಕೀರ ಸಿದ್ಧರಾಮೇಶ್ವರ ಸ್ವಾಮೀಜಿ ಸೇರಿದಂತೆ ಇತರೆ ಮಠಾಧೀಶರು  ಸಾನ್ನಿಧ್ಯ ವಹಿಸಲಿದ್ದಾರೆ.

ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಕಾರ್ಯಕ್ರಮ ಉದ್ಘಾಟಿಸುವರು. ಶಾಸಕ ಶಾಮನೂರು ಶಿವಶಂಕರಪ್ಪ ಅಧ್ಯಕ್ಷತೆ ವಹಿಸಲಿದ್ದು, ಸಚಿವ ಈಶ್ವರ ಖಂಡ್ರೆ ಸಮಾರೋಪ ಭಾಷಣ ಮಾಡಲಿದ್ದಾರೆ. 

ಇದೇ ವೇಳೆ ಮಹಾಸಭಾ ರಾಜ್ಯಾಧ್ಯಕ್ಷ ಎನ್. ತಿಪ್ಪಣ್ಣ ಅವರಿಗೆ ಗೌರವ ಸಮರ್ಪಣೆ ನೆರವೆರಲಿದೆ.

error: Content is protected !!