ನಗರದಲ್ಲಿ ಇಂದು `ಚೇತನ ಸೌರಭ’

ಚೇತನ ವಿದ್ಯಾಸಂಸ್ಥೆಯ ವಿದ್ಯಾಚೇತನ ಪಿಯು ಕಾಲೇಜಿನ ವಾರ್ಷಿಕೋತ್ಸವ `ಚೇತನ ಸೌರಭ’ ಕಾರ್ಯಕ್ರಮವು ಶ್ರೀಮತಿ ಸುಧಾ ವೀರೇಂದ್ರ ಪಾಟೀಲ್ ಸಮುದಾಯ ಭವನದಲ್ಲಿ ಇಂದು ಬೆಳಿಗ್ಗೆ 9 ಗಂಟೆಯಿಂದ ನಡೆಯಲಿದೆ.
ಕಾಲೇಜಿನ ಅಧ್ಯಕ್ಷರಾದ ಶ್ರೀಮತಿ ವಿಜಯಲಕ್ಷ್ಮಿ ವೀರಮಾಚನೇನಿ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದು, ಎಸ್.ಜಿ. ಕರಿಸಿದ್ದಪ್ಪ, ಪಿ. ಶಶಿಕಲಾ, ಎ.ಕೆ. ರುದ್ರೇಶ್, ವಿ. ರಾಘವೇಂದ್ರ ಪ್ರಸಾದ್, ವಿ.ವಿ. ಕಿರಣ್, ಲೇಖ ಕಿರಣ್ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರುವರು.
ವಿಶ್ವಚೇತನ ವಿದ್ಯಾನಿಕೇತನ ಕಾಲೇಜು : ವಿಶ್ವಚೇತನ ವಿದ್ಯಾನಿಕೇತನ ಕಾಲೇಜಿನ ವಾರ್ಷಿಕೋತ್ಸವ ಚೇತನ ಸೌರಭ ಕಾರ್ಯಕ್ರಮವು ಶ್ರೀಮತಿ ಸುಧಾ ವೀರೇಂದ್ರ ಪಾಟೀಲ್ ಸಮು ದಾಯ ಭವನದಲ್ಲಿ ಇಂದು ಸಂಜೆ 4 ಗಂಟೆಯಿಂದ ನಡೆಯಲಿದೆ.
ಶ್ರೀ ಬಸವಪ್ರಭು ಶ್ರೀಗಳು ದಿವ್ಯ ಸಾನ್ನಿಧ್ಯ ವಹಿಸಲಿದ್ದು, ಕಾಲೇಜಿನ ಅಧ್ಯಕ್ಷರಾದ ಶ್ರೀಮತಿ ವಿಜಯಲಕ್ಷ್ಮಿ ವೀರಮಾಚನೇನಿ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಬಿ.ಎಸ್. ಬಸವರಾಜ್, ಆದರ್ಶ ಗೋಖಲೆ, ವಿ.ವಿ. ಕಿರಣ್, ಲೇಖ ಕಿರಣ್ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರುವರು.

error: Content is protected !!