ನಗರದಲ್ಲಿ ಇಂದು ಸಮಾರೋಪ

ಶ್ರೀಮತಿ ಪಾರ್ವತಮ್ಮ ಶಾಮನೂರು ಶಿವಶಂಕರಪ್ಪ ವಿಜ್ಞಾನ ಪದವಿ ಪೂರ್ವ ಕಾಲೇಜು ವತಿಯಿಂದ ವಿದ್ಯಾರ್ಥಿ ವೇದಿಕೆ, ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳ ಸಮಾ ರೋಪ ಸಮಾರಂಭವನ್ನು ಇಂದು ಬೆಳಿಗ್ಗೆ 11 ಕ್ಕೆ ಕಾಲೇಜಿನ ಶ್ರೀಮತಿ ಪಾರ್ವತಮ್ಮ ಶಾಮನೂರು ಶಿವಶಂಕರಪ್ಪ ಸಭಾಂಗಣ ದಲ್ಲಿ ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿ ಗಳಾಗಿ ಬಾಪೂಜಿ ವಿದ್ಯಾಸಂಸ್ಥೆ ಸದಸ್ಯ ಡಾ. ಸಂಪಣ್ಣ ವಿ. ಮುತಾಲಿಕ್, ಕಾಲೇಜಿನ ಹಳೆಯ ವಿದ್ಯಾರ್ಥಿ ಹೆಚ್.ಬಿ. ಅಭಿಲಾಷ್, ಹರಿ ಹರದ ಉಪ ವಿಭಾಗ ಅರಣ್ಯಧಿಕಾರಿ ಮಹಮ್ಮದ್ ಖಾಲಿದ್  ಪಾಲ್ಗೊಳ್ಳಲಿದ್ದು, ಶೈಕ್ಷಣಿಕ ಸಲಹೆಗಾರ ಜಗನ್ನಾಥ ನಾಡಿಗೇರ್ ಸಮಾರೋಪ ಭಾಷಣ ಮಾಡುವರು. ಅಧ್ಯಕ್ಷತೆಯನ್ನು ಪ್ರಾಂಶುಪಾಲ  ಪ್ರೊ. ಎಂ.ಪಿ. ರುದ್ರಪ್ಪ ವಹಿಸುವರು. 

error: Content is protected !!