ಶಿವಾಜಿನಗರದ ಬಳಿಯ ನಗರ ದೇವತೆ ಶ್ರೀ ದುರ್ಗಾಂಬಿಕಾ ದೇವಿ ದೇವಸ್ಥಾನದ ಬಳಿ ಇರುವ ರಾಣೇಬೆನ್ನೂರು ತಾಲ್ಲೂಕಿನ ಐರಣಿ ಹೊಳೆ ಮಠದ ಶಾಖಾ ಮಠದಲ್ಲಿ ಇಂದು ಸಂಜೆ 7.30ಕ್ಕೆ ಕಡೇ ಕಾರ್ತಿಕೋತ್ಸವ ನಡೆಯಲಿದೆ ಎಂದು ಶಾಖಾ ಮಠದ ಜೋಗಪ್ಳರ ಶಿವಾನಂದ್ ತಿಳಿಸಿದ್ದಾರೆ.
ಐರಣಿ ಹೊಳೆಮಠದ ಶ್ರೀ ಬಸವರಾಜ ದೇಶೀಕೇಂದ್ರ ಸ್ವಾಮೀಜಿ ಇಂದು ಸಂಜೆ 4 ಗಂಟೆಗೆ ನಗರಕ್ಕೆ ಆಗಮಿಸಲಿದ್ದು, ಕಾರ್ತಿಕೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ದೀಪೋತ್ಸವಕ್ಕೆ ಚಾಲನೆ ನೀಡಿ, ಆಶೀರ್ವಚನ ಮಾಡುವರು.