ವಾಲ್ಮೀಕಿ ಜಾತ್ರೆ; 9ರಂದು ಪೂರ್ವಭಾವಿ ಸಭೆ

ಹರಿಹರ, ಜ. 6- ರಾಜನಹಳ್ಳಿ ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠದ ಆವರಣದಲ್ಲಿ ಫೆಬ್ರವರಿ 8 ಮತ್ತು 9 ರಂದು ನಡೆಯುವ  6ನೇ ವರ್ಷದ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಜಾತ್ರೆಯ ಪ್ರಯುಕ್ತ ಇದೇ ದಿ. 9 ರಂದು ಮಂಗಳವಾರ ಬೆಳಗ್ಗೆ 11 ಗಂಟೆಗೆ ಶ್ರೀಮಠದ ಸಭಾ ಭವನದಲ್ಲಿ ಪೂರ್ವಭಾವಿ ಸಭೆಯನ್ನು ಆಯೋಜಿಸಲಾಗಿದೆ ಎಂದು ವಾಲ್ಮೀಕಿ ಗುರುಪೀಠದ ಆಡಳಿತ ಅಧಿಕಾರಿ ಟಿ. ಓಬಳಪ್ಪ ಮತ್ತು ಧರ್ಮದರ್ಶಿ ಕೆ.ಬಿ. ಮಂಜುನಾಥ್ ತಿಳಿಸಿದ್ದಾರೆ.

error: Content is protected !!