9 ರಂದು ಕದಳಿ ಮಹಿಳಾ ವೇದಿಕೆಯ ವಾರ್ಷಿಕೋತ್ಸವ, ಪ್ರಶಸ್ತಿ ಪ್ರದಾನ

ದಾವಣಗೆರೆ, ಜ. 6-  ಕದಳಿ ಮಹಿಳಾ ವೇದಿಕೆಯ 15ನೇ ವಾರ್ಷಿಕೋತ್ಸವ ಹಾಗೂ ಕದಳಿ ಶ್ರೀ ಪ್ರಶಸ್ತಿ ಪ್ರಧಾನ ಸಮಾರಂಭವು ಇದೇ ದಿನಾಂಕ 9ರ ಮಂಗಳವಾರ ಶಾಮನೂರು ಶಿವಶಂಕರಪ್ಪ ಪಾರ್ವತಮ್ಮ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ.

ಗದಗಿನ ಅಧ್ಯಾತ್ಮ  ವಿದ್ಯಾಶ್ರಮದ ಡಾ. ನೀಲಮ್ಮ ತಾಯಿ ಅಸುಂಡಿ ಅವರ ದಿವ್ಯ ಸಾನ್ನಿಧ್ಯದಲ್ಲಿ ನಡೆಯುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಿವೃತ್ತ ಐಎಎಸ್ ಅಧಿಕಾರಿ ಡಾ. ಸಿ. ಸೋಮಶೇಖರ್ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಪೊಲೀಸ್ ವರಿಷ್ಠಾಧಿಕಾರಿ ಶ್ರೀಮತಿ ಉಮಾ ಪ್ರಶಾಂತ್ ಭಾಗವಹಿಸುವರು.

ಸಿರಿಗೆರೆಯ ಎಂ.ಬಿ.ಆರ್. ಕಾಲೇಜಿನ ನಿವೃತ್ತ ಪ್ರಾಚಾರ್ಯರಾದ ಪ್ರೊ. ಟಿ. ನೀಲಾಂಬಿಕೆ ಅವರಿಗೆ ಈ ಬಾರಿಯ ಕದಳಿ ಶ್ರೀ ಪ್ರಶಸ್ತಿ ನೀಡಲಾಗುವುದು ಎಂದು ಕದಳಿ ಮಹಿಳಾ ವೇದಿಕೆಯ ಕಾರ್ಯದರ್ಶಿ ಶ್ರೀಮತಿ ಚಂದ್ರಿಕಾ ಮಂಜುನಾಥ್ ತಿಳಿಸಿದ್ದಾರೆ. 

ಅನ್‌ಮೋಲ್ ವಿದ್ಯಾಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ಯಶಾ ಮತ್ತು ದಿನೇಶ್ ಸಿ.ಜಿ. ಅವರು (ಸಾವಿತ್ರಮ್ಮ ಮತ್ತು ಪ್ರೊ. ಬಿ.ಕೆ. ಸಿದ್ದಪ್ಪ ಬಾಡ ) ದತ್ತಿ ದಾನಿಗಳಾಗಿದ್ದಾರೆ.

ಇದೇ ಸಂದರ್ಭದಲ್ಲಿ ಕಿರುವಾಡಿ ಗಿರಿಜಮ್ಮನವರ ಪ್ರಾಯೋಜಕತ್ವದಲ್ಲಿ ಕದಳಿ ಮಹಿಳಾ ವೇದಿಕೆಯ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ, ಸಾಧಕರಿಗೆ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು  ಚಂದ್ರಿಕಾ ಮಂಜುನಾಥ್ ವಿವರಿಸಿದ್ದಾರೆ.

error: Content is protected !!