ದಾವಣಗೆರೆ, ಜ. 10- ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇ ಜುಗಳ ಉಪನ್ಯಾಸಕರ ಸಂಘದ ಜಿಲ್ಲಾ ಶಾಖೆ ವತಿಯಿಂದ ನಾಳೆ ದಿನಾಂಕ 11 ರ ಗುರುವಾರ ಬೆಳಿಗ್ಗೆ 10 ಕ್ಕೆ ನಗರದ ಸರ್ಕಾರಿ ನೌಕರರ ಸಮುದಾಯ ಭವನದಲ್ಲಿ ಶೈಕ್ಷಣಿಕ ಸಮಾವೇಶ, ನಿವೃತ್ತ ಪ್ರಾಚಾರ್ಯರು ಹಾಗೂ ನಿವೃತ್ತ ಉಪನ್ಯಾಸಕರಿಗೆ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಸಿ.ಬಿ. ರವಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಸಂಸದ ಜಿ.ಎಂ. ಸಿದ್ದೇಶ್ವರ ಅವರು ಸಮಾರಂಭವನ್ನು ಉದ್ಘಾಟಿಸುವರು. ಧಾರವಾಡದ ಹ್ಯೂಮನ್ ಮೈಂಡ್ಸೆಟ್ ಕೋಚ್ ಸೆಂಟರ್ ನ ಮಹೇಶ್ ಮಾಶ್ಯಾಳ್ ವಿಶೇಷ ಉಪನ್ಯಾಸ ನೀಡಲಿದ್ದಾರೆ. ಜಿಲ್ಲಾ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಬಿ. ಪಾಲಾಕ್ಷಿ ಪ್ರಾಸ್ತಾವಿಕವಾಗಿ ಮಾತನಾಡಲಿದ್ದಾರೆ.
ಬೋಧನೆಯಲ್ಲಿ ಮೌಲ್ಯಾಧರಿತ ಶಿಕ್ಷಣ ಕುರಿತು ಎಂ.ಎಂ. ಶಿಕ್ಷಣ ಮಹಾವಿದ್ಯಾಲಯದ ನಿವೃತ್ತ ಪ್ರಾಚಾರ್ಯ ಡಾ.ಹೆಚ್.ವಿ. ವಾಮದೇವಪ್ಪ ಉಪನ್ಯಾಸ ನೀಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ, ಬೆಂಗಳೂರು ಅಧ್ಯಕ್ಷ ಎ.ಹೆಚ್. ನಿಂಗೇಗೌಡ, ಡಿಡಿಪಿಯು ಎಸ್.ಜಿ. ಕರಿಬಸಪ್ಪ, ಜಿಲ್ಲಾಧ್ಯಕ್ಷ ವೀರೇಶ್ ಎಸ್.ಒಡೇನಪುರ ಮುಂತಾದ ಗಣ್ಯರು ಭಾಗವಹಿಸಲಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಸಂಘದ ಪದಾಧಿಕಾರಿಗಳಾದ ಬಿ. ಪಾಲಾಕ್ಷಿ, ದೊಡ್ಡವೀರ ಪ್ರಭು, ಎಸ್.ಜಿ. ನಾಗರಾಜ್, ಮಂಜಪ್ಪ ಎಫ್. ಹಿತ್ತಲಮನಿ ಉಪಸ್ಥಿತರಿದ್ದರು.