ಮೀಸಲಾತಿ: ಇಂದು ಶ್ರೀ ಜಯಮೃತ್ಯುಂಜಯ ಸ್ವಾಮೀಜಿಯಿಂದ ಹೆದ್ದಾರಿಯಲ್ಲಿ ಲಿಂಗಪೂಜೆ

ಪಂಚಮ ಸಾಲಿ ಎಲ್ಲ ಲಿಂಗಾಯತರಿಗೆ ಓಬಿಸಿ ಮೀಸಲಾತಿ ಕೊಡುವಂತೆ ಒತ್ತಾಯಿಸಿ, ಮೋಟೆಬೆನ್ನೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಲಿಂಗಪೂಜೆ ಮಾಡುವು ದರೊಂದಿಗೆ ಸರ್ಕಾರಕ್ಕೆ ಒತ್ತಾಯಿಸಲಾಗುವುದು ಎಂದು ಕೂಡಲ ಸಂಗಮ ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ಜಯಮೃತ್ಯುಂಜಯ ಸ್ವಾಮೀಜಿ ತಿಳಿಸಿದ್ದಾರೆ. ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿ ಜಿಲ್ಲಾ ಮಟ್ಟದಲ್ಲಿ ಶಾಂತಿಯುತವಾಗಿ ಪೂಜೆಯೊಂದಿಗೆ ಹೆದ್ದಾರಿ ಬಂದ್ ಮಾಡುವುದರ ಮೂಲಕ ಒತ್ತಾಯಿಸಲಾಗುವುದು ಎಂದು ಹೇಳಿದರು. 

error: Content is protected !!