ಭಾರತ್ ಜೋಡೋ ನ್ಯಾಯ ಯಾತ್ರೆಯಲ್ಲಿ ಕಲ್ಲೇಶ್ ರಾಜ್

ಭಾರತ್ ಜೋಡೋ ನ್ಯಾಯ ಯಾತ್ರೆಯಲ್ಲಿ ಕಲ್ಲೇಶ್ ರಾಜ್

ಜಗಳೂರು, ಜ.22- ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ  ಭಾರತ್ ಜೋಡೋ ಯಾತ್ರೆಯ ಎರಡನೇ ಭಾಗವಾದ ಭಾರತ್ ಜೋಡೋ ನ್ಯಾಯ ಯಾತ್ರೆ ಮಣಿಪುರದಿಂದ ಮುಂಬೈವರೆಗೂ ಆರಂಭವಾಗಿದೆ.

ಈ ಯಾತ್ರೆಯಲ್ಲಿ ತಾಲ್ಲೂಕಿನ ಕೆಪಿಸಿಸಿ ಸದಸ್ಯ ಹಾಗೂ ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್  ಆಕಾಂಕ್ಷಿ ಕಲ್ಲೇಶ್ ರಾಜ್ ಪಟೇಲ್ ಅವರು ಸಕ್ರಿಯವಾಗಿ ಪಾಲ್ಗೊಂಡು  ಹೆಜ್ಜೆ ಹಾಕುತ್ತಿದ್ದಾರೆ.

ರಾಹುಲ್ ಗಾಂಧಿ ನೇತೃತ್ವದಲ್ಲಿ ಭಾರತ್ ಜೋಡೋ ನ್ಯಾಯ ಯಾತ್ರೆ ಜನವರಿ 14 ರಿಂದ ಮಣಿಪುರದ ಇಂಪಾಲ್ ನ ಕೊಂಗ್ ಜುಮ್ ನಿಂದ ಆರಂಭವಾಗಿದೆ. ಕೇಂದ್ರ ಸರ್ಕಾರದ ಆಡಳಿತ ವೈಫಲ್ಯಗಳ ವಿರುದ್ದ ಹಾಗೂ ದೇಶದ ಜನರನ್ನು ಒಗ್ಗೂಡಿಸಲು ಈ ಯಾತ್ರೆ ಹಮ್ಮಿಕೊಳ್ಳಲಾಗಿದೆ.

ದೇಶದ 15 ರಾಜ್ಯಗಳ 110 ಜಿಲ್ಲೆಗಳಲ್ಲಿ 66 ದಿನಗಳಲ್ಲಿ 6700 ಕಿ.ಮೀ ದೂರದ ಯಾತ್ರೆಯುದ್ದಕ್ಕೂ ರಾಹುಲ್ ಗಾಂಧಿಯವರು ಕೇಂದ್ರ ಸರ್ಕಾರದ ವೈಫಲ್ಯಗಳನ್ನು ಎತ್ತಿಹಿಡಿದು ಜನಜಾಗೃತಿಯೊಂದಿಗೆ ವಾಗ್ದಾಳಿ ನಡೆಸುತ್ತಿದ್ದಾರೆ. 

ರಾಹುಲ್ ಗಾಂಧಿಯವರಿಗೆ ಮಣಿಪುರ, ನಾಗಲ್ಯಾಂಡ್, ಅಸ್ಸಾಂ ರಾಜ್ಯಗಳು ಸೇರಿದಂತೆ, ಹೋದ ಕಡೆಯಲ್ಲಿ ಅದ್ದೂರಿ ಸ್ವಾಗತ,ಉತ್ತಮ ಸ್ಪಂದನೆ,ಪ್ರತಿಕ್ರಿಯೆ ಸಿಗುತ್ತಿದ್ದು, ರಾಹುಲ್ ಗಾಂಧಿ ಅವರ ಸರಳತೆ,ಜನತೆಯೊಂದಿಗೆ ಒಡನಾಡಿತನ, ಜನರ ಮನಸ್ಸಿಗೆ
ಹತ್ತಿರವಾಗುವ ರೀತಿ,ನಡತೆಗಳು ನಮಗೆಲ್ಲಾ ಮಾದರಿ ಎಂದು ಕಲ್ಲೇಶ್ ರಾಜ್ ಪಟೇಲ್ ಪತ್ರಿಕೆಗೆ ತಿಳಿಸಿದ್ದಾರೆ.

error: Content is protected !!