ದಾವಣಗೆರೆ, ಜ. 23- ನಗರದ ದೇವರಾಜ ಅರಸು ಬಡಾವಣೆ `ಎ’ ಬ್ಲಾಕ್ ನಲ್ಲಿರುವ ಶ್ರೀ ಮಾತಾ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ನಾಡಿದ್ದು ದಿನಾಂಕ 25ರ ಗುರುವಾರದಂದು ಬನದ ಹುಣ್ಣಿಮೆ ಪ್ರಯುಕ್ತ ಶ್ರೀ ಸತ್ಯ ನಾರಾಯಣ ಸ್ವಾಮಿ ಪೂಜಾ ಕಥಾ, ಪ್ರಧಾನ ದೇವತೆ ಶ್ರೀ ಮಾತಾ ಅನ್ನಪೂರ್ಣೇಶ್ವರಿಗೆ ಮಹಾ ಮಂಗಳಾರತಿ ಮತ್ತು ತೀರ್ಥ ಪ್ರಸಾದ ವಿನಿಯೋಗ ನಡೆಯಲಿದೆ ಎಂದು ದೇವಸ್ಥಾನ ಸಮಿತಿ ಗೌರವ ಅಧ್ಯಕ್ಷ ಅರ್.ಜಿ. ನಾಗೇಂದ್ರ ಪ್ರಕಾಶ್ ತಿಳಿಸಿದ್ದಾರೆ. ಶ್ರೀಮತಿ ನಾಗರತ್ನಮ್ಮ ಗುತ್ತಿದುರ್ಗದ ನೀಲಕಂಠಪ್ಪ ಮಕ್ಕಳು ಹಾಗೂ ಕುಟುಂಬದವರು ಸೇವಾಕರ್ತರಾಗಿದ್ದಾರೆ.
ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ನಾಳೆ ಬನದ ಹುಣ್ಣಿಮೆ ವಿಶೇಷ ಪೂಜೆ
![33 annapurneshwari 05.04.2023 ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ನಾಳೆ ಬನದ ಹುಣ್ಣಿಮೆ ವಿಶೇಷ ಪೂಜೆ](https://janathavani.com/wp-content/uploads/2023/04/33-annapurneshwari-05.04.2023.jpg)