ನಾಳೆ `ಟೈಗರ್ 5 ಎಸ್‌ಡಿಕೆ ಕಪ್’ ರಾಜ್ಯಮಟ್ಟದ ಫುಟ್ಬಾಲ್ ಪಂದ್ಯಾವಳಿ

ದಾವಣಗೆರೆ, ಜ. 24- ದೇವನಗರಿ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘದ ವತಿಯಿಂದ ಸಂಘದ ಅಧ್ಯಕ್ಷ ಶ್ರೀನಿವಾಸ ದಾಸಕರಿಯಪ್ಪ ಅವರ ಹುಟ್ಟುಹಬ್ಬದ ಅಂಗವಾಗಿ ನಾಡಿದ್ದು ದಿನಾಂಕ 26 ಹಾಗೂ 27ರಂದು 8ನೇ ವರ್ಷದ ರಾಜ್ಯ ಮಟ್ಟದ ಹೊನಲು ಬೆಳಕಿನ `ಟೈಗರ್ 5 ಎಸ್‌ಡಿಕೆ ಕಪ್’ ಫುಟ್ಬಾಲ್ ಪಂದ್ಯಾವಳಿ ಆಯೋಜಿಸಲಾಗಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಆರ್.ಚಂದ್ರಶೇಖರ್ ತಿಳಿಸಿದ್ದಾರೆ. ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ನಿಜಲಿಂಗಪ್ಪ ಬಡಾವಣೆಯಲ್ಲಿರುವ ದೇವನಗರಿ ಕ್ರೀಡಾಂಗಣದಲ್ಲಿ ಈ ಪಂದ್ಯಾವಳಿಗಳು ನಡೆಯಲಿದ್ದು, ಬೆಂಗಳೂರು, ಬೆಳಗಾವಿ, ಬಳ್ಳಾರಿ, ಚಿತ್ರದುರ್ಗ, ತುಮಕೂರು, ಶಿವಮೊಗ್ಗ, ಹುಬ್ಬಳ್ಳಿ ಸೇರಿದಂತೆ ವಿವಿಧ ಜಿಲ್ಲೆಗಳಿಂದತಂಡಗಳು ಭಾಗವಹಿಸಲಿವೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ಸಂದೇಶ್, ರೇಣು ಎಂ.ಎನ್., ರವೀಂದ್ರ ವಿ.ಟಿ., ಮಲ್ಲಿಕಾರ್ಜುನ್ ಹೆಚ್.ಜೆ, ದೊಡ್ಡಪ್ಪ ಡಿ.ಆರ್., ಅರುಣ್ ಕುಮಾರ್, ಆಫ್ತಾ ಇತರರಿದ್ದರು.

error: Content is protected !!