ಆರ್ಥಿಕ ಸಾಕ್ಷರತೆ, ಉದಯೋನ್ಮುಖ ಅವಕಾಶಗಳ ಕುರಿತು ನಗರದಲ್ಲಿ ಇಂದು ಜಾಗೃತಿ ಕಾರ್ಯಕ್ರಮ

ಸಣ್ಣ ಕೈಗಾರಿಕೆಗಳ ಅಭಿವೃದ್ದಿ ಬ್ಯಾಂಕ್ ಆಫ್ ಇಂಡಿಯಾ, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಕೆನರಾ ಬ್ಯಾಂಕ್ ಮತ್ತು ರಾಜ್ಯ ಸಣ್ಣ ಕೈಗಾರಿಕೆಗಳ ಉದ್ದಿಮೆದಾರರ ಸಂಘ ಇವರ ವತಿಯಿಂದ ಇಂದು ಬೆಳಗ್ಗೆ 10.30 ಕ್ಕೆ ಹೋಟೆಲ್ ಸಾಯಿ ಇಂಟರ್ ನ್ಯಾಷನಲ್‍ನಲ್ಲಿ ಎಂಎಸ್‍ಎಂಇಗಳಿಗೆ ಆರ್ಥಿಕ ಸಾಕ್ಷರತೆ ಮತ್ತು ಉದಯೋನ್ಮುಖ ಅವಕಾಶಗಳ ಕುರಿತು ಜಾಗೃತಿ ಕಾರ್ಯಕ್ರಮ ಏರ್ಪಡಿಸಲಾಗಿದೆ.

ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕ ಟೇಶ್, ಕೆನರಾ ಬ್ಯಾಂಕಿನ ಸಹಾಯಕ ಪ್ರಧಾನ ವ್ಯವಸ್ಥಾಪಕ ವೈ.ವಿ.ಎನ್.ಶಿವಪ್ರಸಾದ್, ಸಣ್ಣ ಕೈಗಾರಿಕೆ ಗಳ ಅಭಿವೃದ್ದಿ ಬ್ಯಾಂಕ್ ಸಹಾಯಕ ವ್ಯವಸ್ಥಾಪಕ ಎಂ.ಆರ್.ವಿಕಾಸ್, ಜಿಲ್ಲಾ ಕೈಗಾರಿಕಾ ಇಲಾಖೆ ಜಂಟಿ ನಿರ್ದೇಶಕ ರಾಜೇಂದ್ರ ನಾಮದೇವ್ ಕದಂ, ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪ ನಿರ್ದೇಶಕ ಶಿವಲಿಂಗಪ್ಪ ಎನ್.ಕುಂಬಾರ, ಕ್ಯಾಸಿಯಾ ಅಧ್ಯಕ್ಷ ಸಿ.ಎ.ಶಶಿಧರ್ ಶೆಟ್ಟಿ ಭಾಗವಹಿಸುವರು.

error: Content is protected !!